Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಕಾರು – ಲಾರಿ ಡಿಕ್ಕಿ : ಓರ್ವ ಸಾವು

---Advertisement---

ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಿರಿಯೂರು – ಚಳ್ಳಕೆರೆ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ಇಂದು (ಗುರುವಾರ) ರಾತ್ರಿ ಸುಮಾರು 9 : 30 ರ ವೇಳೆಗೆ ನಡೆದಿದೆ.

ಹಿರಿಯೂರು – ಚಳ್ಖಕೆರೆ ರಸ್ತೆಯ ಆರ್.ಕೆ. ಪವರ್ ಬಳಿ ಘಟನೆ ನಡೆದಿದ್ದು, ಇಕೋ ವಾಹನ ಓವರ್ ಟೇಕ್ ಮಾಡುವಾಗ ಮುಂದೆ ಬರುತ್ತಿದ್ದ ಈಚರ್ ವಾಹನಕ್ಕೆ ಕಾರ್ ಡಿಕ್ಕಿಯಾದ ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಹಿರಿಯೂರಿನ ಸಿದ್ಧನಾಯಕ ಸರ್ಕಲ್ ನಿವಾಸಿ ಸಿದ್ಧರಾಜು(35) ಎಂದು ಗುರುತಿಸಲಾಗಿದೆ. ಹಿರಿಯೂರು ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...