ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188
ಸುದ್ದಿಒನ್, ಹಿರಿಯೂರು, ಮಾರ್ಚ್. 04 : ಜಮೀನು ದಾರಿ ವಿಚಾರವಾಗಿ ಎರಡು ಗುಂಪಿನ ನಡುವೆ ಘರ್ಷಣೆ ನಡೆದಿದ್ದು,
ಸಿನಿಮೀಯ ಶೈಲಿಯಲ್ಲಿ ಕಲ್ಲು, ದೊಣ್ಣೆ ಹಿಡಿದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

ತಾಲ್ಲೂಕಿನ ಭರಮಗಿರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,
ಈ ಘಟನೆಯಲ್ಲಿ ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿವೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಭರಮಗಿರಿ ಗ್ರಾಮದ ದೇವರಾಜ್, ಮನೋಜ್, ರಮೇಶ್ ಮತ್ತು ಕರಿಯಪ್ಪ ಗಾಯಗೊಂಡವರು. ತಾಲೂಕಿನ ಕುಂಟಪ್ಪನಹಟ್ಟಿ ಹಾಗೂ ತಳವಾರಹಟ್ಟಿ ಗ್ರಾಮದ 20 ಕ್ಕೂ ಹೆಚ್ಚು ಜನರಿಂದ ಈ ಹಲ್ಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















