Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರಿನಲ್ಲಿ ಕಾಂಗ್ರೆಸ್ ಮುಖಂಡರ ಬಡಿದಾಟ

---Advertisement---

ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್ ವಿಷಯಕ್ಕೆ ಬಡಿದಾಡಿಕೊಂಡ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಆರ್ ಟಿ ಐ ಕಾರ್ಯಕರ್ತ, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಹಕಾರ ಸಂಘಗಳ ಮಹಾ ಮಂಡಲದ ರಾಜ್ಯ ನಿರ್ದೇಶಕ ಕಂದಿಕೆರೆ ಜಗದೀಶ್ ಮತ್ತು ಯೂತ್ ಕಾಂಗ್ರೆಸ್ ನ ತಾಲ್ಲೂಕು ಉಪಾಧ್ಯಕ್ಷ ಜೆಜಿ ಹಳ್ಳಿ ಕೇಶವ ಅಂಡ್ ಟೀಂ ನಡುವೆ ನಡೆದ ಕದನವಿದು. ಗ್ರಾಮ ಪಂಚಾಯ್ತಿಯ ಕಾಮಗಾರಿಗಳ ಟೆಂಡರ್ ವಿಚಾರಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದ್ದು ಜೆಜಿ ಹಳ್ಳಿ ಕೇಶವ ಎಂಬುವರು ಎಲ್ಲಿದ್ದೀಯೋ ಮನೆಗೆ ಬರುತ್ತೇನೆ, ಇವತ್ತು ಇದೆ ನಿನಗೆ, ಮನೆಗೆ ಬಂದು ಹೊಡೆಯುತ್ತೇನೆ. ಪೂರ್ಣಿಮಕ್ಕನ ಎದಿರು ಹಾಕಿಕೊಂಡು ಸಾಹೇಬನಿಗೆ ವೋಟ್ ಹಾಕಿಸಿರೋದು ನಾವು, ಇರೋ ಬರೋ ಪಂಚಾಯ್ತಿಗಳಲೆಲ್ಲಾ ಕೈಯಾಡಿಸ್ತೀಯ ಎಂದು ಮಾತಾಡಿರುವ ಆಡಿಯೋ ಸಹ ಎಲ್ಲರ ಮೊಬೈಲ್ ನಲ್ಲಿ ಹರಿದಾಡುತ್ತಿದೆ. ಎರಡು ಕಡೆಯವರು ಜಗಳದಲ್ಲಿ ನೂಕಾಟ, ತಳ್ಳಾಟವಾಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೇಶವ್, ಮಾರುತಿ ಮತ್ತು ಇತರೇ ಏಳೆಂಟು ಜನರ ವಿರುದ್ಧ ನಗರ ಠಾಣೆಯಲ್ಲಿ ಜಗದೀಶ್ ಕಂದೀಕೆರೆ ಪತ್ನಿ ಪ್ರಕರಣ ದಾಖಲಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment