ಹಿರಿಯೂರು | ಭೀಕರ ಅಪಘಾತ ; ನಾಲ್ವರು ಸಾವು

0 Min Read

 

ಸುದ್ದಿಒನ್, ಹಿರಿಯೂರು, ಜನವರಿ. 10 : ತಾಲ್ಲೂಕಿನ ಹಿಂಡಸಕಟ್ಟೆ ಗೇಟ್ ಸಮೀಪ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಇಂದು ರಾತ್ರಿ (ಜನವರಿ. 10) 10 ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಹಿರಿಯೂರು ತಾಲೂಕಿನ ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್(22 ವರ್ಷ), ನಂಜುಂಡಿ(23 ವರ್ಷ), ರಾಹುಲ್(23 ವರ್ಷ) ಮತ್ತು ಯಶ್ವಂತ್ (22 ವರ್ಷ) ಎಂದು ಗುರುತಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

Share This Article
Enable Notifications OK No thanks