Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು | ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವು ; ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

Facebook
Twitter
Telegram
WhatsApp

ಹಿರಿಯೂರು, (ಡಿ.13): ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಆಲೂರು ಕ್ರಾಸ್ ಬಳಿ ಇಂದು (ಸೋಮವಾರ) ಬೆಳಗಿನ ಜಾವ ಈ ದುರಂತ ಸಂಭವಿಸಿದೆ.

ಬೆಂಗಳೂರು ಕಡೆಗೆ ಈರುಳ್ಳಿ ತುಂಬಿದ್ದ ಲಾರಿ ಹೋಗುತ್ತಿರುವಾಗ ಟೈರ್ ಸ್ಪೋಟವಾಗಿ ಲಾರಿ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಈರುಳ್ಳಿ ಚೀಲಗಳು ಚೆಲ್ಲಾಪಿಲ್ಲಿಯಾಗಿದ್ದು, ಇನ್ನೂ ಎರಡು ಲಾರಿಗಳು ಪಲ್ಟಿಯಾಗಿವೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಲಾರಿ ಮತ್ತು ಕಾರುಗಳು ಡಿಕ್ಕಿಯಾಗಿ ಸರಣಿ ಅಪಘಾತವಾಗಿದೆ.

ಮೃತರನ್ನು ಹನುಮಪ್ಪ ಕಳಕಪ್ಪ ಹುನಗುಂದಿ (30),
ಗುರಪ್ಪಾ ಹುಗರ್  (26), ರಮೇಶ್ (28), ಪ್ರಾಶಂತ್ ಹಟ್ಟಿ (36) ಗದಗ ಜಿಲ್ಲೆಯ ಹುಯಿಗೊಳ ಗ್ರಾಮದವರು ಎಂದು ಗುರುತಿಸಲಾಗಿದೆ.  ಗಾಯಗೊಂಡವರನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಎಸ್ಪಿ ಜಿ ರಾಧಿಕಾ, ಡಿವೈಎಸ್ಪಿ ರೋಷರ್ ಜಮೀರ್,  ಸಿಪಿಐ  ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

error: Content is protected !!