Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಜುಲೈ 10ರಂದು ಸಾಯಿಬಾಬಾ ಮಂದಿರದಲ್ಲಿ ಗುರು ಪೌರ್ಣಮಿ ಮಹೋತ್ಸವ

---Advertisement---

ಸುದ್ದಿಒನ್, ಹಿರಿಯೂರು, ಜುಲೈ. 07 : ತಾಲೂಕಿನ ಗುಯಿಲಾಳ್ ಟೋಲ್ ಬಳಿ ಇರುವ ಶ್ರೀ ಸದ್ಗುರು ಸಾಯಿ ದತ್ತಾಶ್ರಮದಲ್ಲಿ ಜುಲೈ 10ರಂದು ಗುರುವಾರ ಬೆಳಗ್ಗೆ ಗುರು ಪೌರ್ಣಮಿ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಸದ್ಗುರು ಸಾಯಿ ದತ್ತಾಶ್ರಮದ ಪೀಠಾಧ್ಯಕ್ಷರು ಹಾಗೂ ಆಧ್ಯಾತ್ಮಿಕ ಚಿಂತಕರಾದ ಪರಮಪೂಜ್ಯ ಶ್ರೀ ಗುರುಮೂರ್ತಿ ಗುರೂಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುರು ಪೌರ್ಣಮಿ ಮಹೋತ್ಸವ ಅಂಗವಾಗಿ ಅಂದು ಸಾಯಿಬಾಬಾ ಮಂದಿರ ದೇವಸ್ಥಾನದಲ್ಲಿ ಬೆಳಿಗ್ಗೆ 8 ಗಂಟೆಗೆ ಗಂಗಾಪೂಜೆ, 8.30ಕ್ಕೆ ವ್ಯಾಸಪೂಜೆ, 9ಕ್ಕೆ ಭಿಕ್ಷಾವಂದನೆ ಮತ್ತು ಆಶೀರ್ವಚನ, 10ಕ್ಕೆ ಕುಂಭಾಭಿಷೇಕ, ಮಧ್ಯಾಹ್ನ 12ಕ್ಕೆ ಆರತಿ ಹಾಗೂ 12.30ಕ್ಕೆ ಪ್ರಸಾದ ವಿತರಣೆ ಮತ್ತು ಅನ್ನದಾಸೋಹ ಕಾರ್ಯಕ್ರಮ ಜರುಗಲಿದೆ. ಬಳಿಕ ಸಂಜೆ 6:30ಕ್ಕೆ ಸಂಜೆ ಆರತಿ, 7ಕ್ಕೆ ಶ್ರೀ ಸಾಯಿ ಬಾಬಾರ ಪಾದಸ್ಪರ್ಶ ಹಾಗೂ ರಾತ್ರಿ 8ಗಂಟೆಗೆ ಶೇಜಾ ಆರತಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಗುರು ಪೌರ್ಣಮಿ ಅಂಗವಾಗಿ 5ಸಾವಿರ ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿದ್ದು, ತಾಲೂಕಿನ ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಸಾಯಿಬಾಬಾರ ಗುರು ಪೌರ್ಣಮಿ ಮಹೋತ್ಸವದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶ್ರೀ ಗುರುಮೂರ್ತಿ ಗುರೂಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment