Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು : ಸೂರಪ್ಪನಹಟ್ಟಿ ಗ್ರಾಮದಲ್ಲಿ ಹೊನ್ನಾರು ಪದ್ದತಿ : ರೈತರ ಸಂಭ್ರಮ

---Advertisement---

ಸುದ್ದಿಒನ್, ಹಿರಿಯೂರು, ಏಪ್ರಿಲ್. 02 : ತಾಲ್ಲೂಕಿನ ಸೂರಪ್ಪನಹಟ್ಟಿ ಗ್ರಾಮದಲ್ಲಿ ಹೊನ್ನಾರು ಹೊಡೆಯುವ ಪದ್ದತಿ ನಡೆದುಕೊಂಡು ಬಂದಿದೆ.

ಹಳ್ಳಿಗಳಲ್ಲಿ ರೈತರು ತಲ ತಲಾಂತರದಿಂದಲೂ ಯುಗಾದಿ ಹಬ್ಬದ ದಿನ ಹೊನ್ನಾರು ಉಳುಮೆಯ ಜಾನಪದೀಯ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಬಂದಿದ್ದು, ಪ್ರತಿವರ್ಷದಂತೆ ಈ ಬಾರಿಯೂ ಈ ಗ್ರಾಮದಲ್ಲಿ ಯುಗಾದಿ ಹಬ್ಬ ಮುಗಿದ ಬಳಿಕ ಗ್ರಾಮದ ಜಮೀನುವೊಂದರಲ್ಲಿ ಎತ್ತುಗಳಿಗೆ ಪೂಜೆ ಸಲ್ಲಿಸಿ ಈ ಆಚರಣೆ ಮಾಡಲಾಯಿತು.

ಚಿನ್ನದ ಉಳುಮೆ: ರೈತರ ಜಮೀನಿನಲ್ಲಿ ಮಾಡುವ ಮೊದಲ ಉಳುಮೆಯನ್ನು ಚಿನ್ನದ ಉಳುಮೆ ಅಥವಾ ಹೊನ್ನಾರು ಎಂದು ರೈತರು ಭಾವಿಸುತ್ತಾರೆ. ಹೊಸ ಪಂಚಾಂಗದ ಪ್ರಕಾರ ಯಾರ ಹೆಸರಿನಲ್ಲಿ ಹೊನ್ನಾರು ಹೂಡಲು ಬರುತ್ತದೆಯೋ ಆ ಹೆಸರಿನ ರೈತನೇ ನೇಗಿಲು ಮತ್ತು ಭೂಮಿಗೆ ಪೂಜೆ ಸಲ್ಲಿಸಿ ಹೊನ್ನಾರು ಹೂಡಿ ವರ್ಷದ ಉಳುಮೆ ಆರಂಭಿಸುವ ಪದ್ಧತಿ ಸಾಂಪ್ರದಾಯಿಕವಾಗಿ ನಡೆದುಬಂದಿದೆ.

ಸೂರಪ್ಪನಹಟ್ಟಿ ಗ್ರಾಮಸ್ಥರು ಊರಿನ ಏಳಿಗೆಗಾಗಿ ಹೊನ್ನಾರ ಹೊಡೆಯುವ ಆಚರಣೆ ನಡೆಸಿಕೊಂಡು ಬಂದಿದ್ದಾರೆ.
ಉತ್ತಮ ಮಳೆಯಾಗಲಿ, ಫಸಲು ಬರಲಿ, ಸಮೃದ್ಧಿ ತರಲಿ ಎಂದು ಬೆಳೆ ಸಮೃದ್ಧಿ ಆಗಲಿ ಎಂದು ಗ್ರಾಮಸ್ಥರೆಲ್ಲರು, ಯಾರ ಹೆಸರಿಗೆ ರಾಶಿ, ಬಲ ಚೆನ್ನಾಗಿರುತ್ತದೋ‌ ಅಂತವರಿಂದ ಪೂಜೆ ಮಾಡಿಸಿ ನೇಗಿಲನ್ನು ಹಿಡಿಯುವ ಮೂಲಕ ಚಾಲನೆ ನೀಡಲಾಗುತ್ತದೆ. ಹೊನ್ನಾರು ಪದ್ದತಿ ಆಚರಣೆ ಮಾಡುವುದರಿಂದ ಗ್ರಾಮದಲ್ಲಿ ಪ್ರತಿ ವರ್ಷ ಒಳ್ಳೆಯ ಯೋಗ ಬರುತ್ತದೆ ಎಂಬ ಪ್ರತಿತಿಯಿದೆ ಎನ್ನುತ್ತಾರೆ ಗ್ರಾಮಸ್ಥರು. ಈ ವರ್ಷ ಕಲ್ಲಪ್ಪ ಪೂಜಾರ್ ಎಂಬ ವ್ಯಕ್ತಿ ಹೊನ್ನಾರ ಹೊಡೆದಿರುವುದು ವಿಶೇಷವಾಗಿದೆ.

ಈ ದಿನ ನೇಗಿಲು, ನೊಗ, ಜಾನುವಾರುಗಳು ಹಾಗೂ ಇತರ ಸಲಕರಣೆಗಳನ್ನು ತೊಳೆದು ಅಲಂಕರಿಸುತ್ತಾರೆ. ನಂತರ ಜಾನುವಾರುಗಳು ಮತ್ತು ಕೃಷಿ ಸಲಕರಣೆಗಳಿಗೆ ಸಾಮೂಹಿಕವಾಗಿ ಪೂಜೆ ಸಲ್ಲಿಸಿ ಭೂಮಿಯಲ್ಲಿ ಮೊದಲ ಉಳುಮೆ ಮಾಡಿ, ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುತ್ತದೆ. ನಂತರ ರೈತರು ತಮ್ಮ ತಮ್ಮ ಜಮೀನಿನಲ್ಲಿ ಚಿನ್ನದ ಮೊದಲ ಉಳುಮೆ ಮಾಡುತ್ತಾರೆ. ಉತ್ತಮ ಮಳೆ – ಬೆಳೆ ಆಗಲಿ, ಎಲ್ಲರಿಗೂ ಒಳ್ಳೆಯ ಆರೋಗ್ಯ ,ಸುಖ – ಸಮೃದ್ಧಿ ಸಿಗಲಿ ಎಂದು ಭೂ ತಾಯಿ, ಪ್ರಕೃತಿಗೆ ನಮಿಸಿ ಪ್ರಾರ್ಥಿಸುತ್ತಾರೆ.

ಇಂದು ಗ್ರಾಮದಲ್ಲಿ ಮಳೆ : ಹೊನ್ನಾರು ಪದ್ದತಿ ಆಚರಣೆ ಮಾಡಿದ ದಿನದಂದೇ ಗ್ರಾಮದಲ್ಲಿ ತುಂತುರು ಮಳೆಯಾಗಿದೆ. ಇದರಿಂದ ಗ್ರಾಮಸ್ಥರಲ್ಲಿ ಹರ್ಷ ತುಂಬಿದೆ. ಈ ಬಾರಿ ಉತ್ತಮ ಮಳೆ ಬೆಳೆಯಾಗಿ ಗ್ರಾಮದಲ್ಲಿ ಸಮೃದ್ಧಿ ಸಿಗುವ ಸಾಧ್ಯತೆ ಇದೆ.

ಈ ಸಂದರ್ಭದಲ್ಲಿ ಕೃಷ್ಣಪ್ಪ, ಬಳ್ಳಿರಣ್ಣ, ಯಜಮಾನ ಕೆಂಚಪ್ಪ, ಬೈಲಣ್ಣ, ರಾಮಪ್ಪ, ಬಾಲಣ್ಣ, ಜಯರಾಮ್,
ಶಿವರಾಜ್, ಕೃಷ್ಣ, ಶಶಿಕುಮಾರ್, ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment