ಹಿರಿಯೂರು | ಜವಗೊಂಡನಹಳ್ಳಿ ಪಿ.ಡಿ.ಒ. ಅಮಾನತು : ಜಿ.ಪಂ. ಸಿಇಒ  ಆದೇಶ

ಚಿತ್ರದುರ್ಗ. ಆಗಸ್ಟ್.02 :  ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮ ಪಂಚಾಯತಿಯಲ್ಲಿ 2018-19 ನೇ ಸಾಲಿನಿಂದ 2022-23ನೇ ಸಾಲಿನವರೆಗಿನ ಪಂಚಾಯತಿಯ ಎಲ್ಲಾ ಹಣಕಾಸು, ಕಾಮಗಾರಿ, ಕಂದಾಯ ಲೆಕ್ಕ ಶೀರ್ಷಿಕೆಯಡಿಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂಬ ಆರೋಪಕ್ಕಾಗಿ

ಜವಗೊಂಡನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಸಿ. ಈಶ್ವರ್ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಶಶಿಕಾಂತ್ ಅವರು ನೀಡಿರುವ ದೂರಿನ ಮೇರೆಗೆ
ಜವಗೊಂಡನಹಳ್ಳಿ ಗ್ರಾ.ಪಂ. ನಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಸಿ. ಈಶ್ವರ್ ಅವರು
ಅವ್ಯವಹಾರ ಎಸಗಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯವರಿಗೆ
ದೂರು ನೀಡಿದ್ದರು.

ಈ ದೂರಿನ ಮೇರೆಗೆ ಹಣಕಾಸು, ಕಾಮಗಾರಿ, ಕಂದಾಯ ಲೆಕ್ಕ ಶೀರ್ಷಿಕೆಯಲ್ಲಿ ಹಾಗೂ ಇತರೆ ಯೋಜನೆಗಳಡಿ ಬಿಡುಗಡೆಯಾದ ಅನುದಾನಗಳ ವೆಚ್ಚಕ್ಕೆ ಸಂಬಂಧಿಸಿದ ಲೆಕ್ಕ ಪತ್ರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸುವಂತೆ ತಿಳಿಸಲಾಗಿತ್ತು. ಆದರೂ ಲೆಕ್ಕ ತನಿಖೆಗೆ ಹಾಜರುಪಡಿಸಿರುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟವರ ಮೇಲೆ ನಿಯಾಮಾನುಸಾರ ಆಡಳಿತಾತ್ಮಕ ಕ್ರಮ ಕೈಗೊಳ್ಳಬಹುದು ಎಂಬುದಾಗಿ ವರದಿಯನ್ನು ಸಲ್ಲಿಸಿರುತ್ತಾರೆ. ಲಿಖಿತ ಸಮಾಜಾಯಿಷಿಯನ್ನು ಸಲ್ಲಿಸುವಂತೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದರೂ ಇದುವರೆವಿಗೂ ತಮ್ಮ ಲಿಖಿತ ಸಮಜಾಯಿಷಿಯನ್ನು ಸಲ್ಲಿಸಿರುವುದಿಲ್ಲ.

ಒಬ್ಬ ಜವಾಬ್ದಾರಿಯುತ ಸರ್ಕಾರಿ ನೌಕರರಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ನಿಯಮಾನುಸಾರ ಸಿ.ಈಶ್ವರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸಿಇಒ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago