Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೆಲಮಂಗಲ ಅಪಘಾತವನ್ನೇ ನೆನಪಿಸಿದ ಹಿರಿಯೂರು ಲಾರಿ ಆಕ್ಸಿಡೆಂಟ್: ಅದೃಷ್ಟವಶಾತ್ ತಪ್ಪಿದ ಅನಾಹುತ..!

---Advertisement---

ಸುದ್ದಿಒನ್, ಹಿರಿಯೂರು, ಜನವರಿ. 03 : ಹೈವೇಗಳಲ್ಲಿ ಬೃಹತ್ ಗಾತ್ರದ ಲಾರಿಗಳ ಓಡಾಟವೇ ಜಾಸ್ತಿ. ಅದರಲ್ಲೂ ಈ ಬೆಂಗಳೂರಿನಿಂದ ತುಮಕೂರು, ಪುಣೆ ಹೈವೆಯಲ್ಲಿ ಅಪಾರ ಪ್ರಮಾಣದ ಸರಕು ತುಂಬಿದ ಲಾರಿಗಳೇ ಚಲಿಸುತ್ತಿರುತ್ತವೆ. ಇಷ್ಟು ದಿನ ಆ ಲಾರಿಗಳು, ಟ್ರಕ್ ಗಳನ್ನು ನೋಡಿದರೆ ಅಷ್ಟೊಂದು ಆತಂಕವಾಗುತ್ತಿರಲಿಲ್ಲ. ಆದರೆ ಕಳೆದ ಕೆಲವು ದಿನಗಳ ಹಿಂದೆ ನೆಲಮಂಗಲ ಸಮೀಪ ಒಂದು ಅಪಘಾತವಾಗಿತ್ತು. ಆ ಆಕ್ಸಿಡೆಂಟ್ ಯಾರೂ ಕೂಡ ಮರೆಯೋದಕ್ಕೆ ಸಾಧ್ಯವಿಲ್ಲ ಬಿಡಿ. ಕಾರಿನ ಮೇಲೆ ಟ್ರಕ್ ಬಿದ್ದು ಆರು ಜನ ಸಾವನ್ನಪ್ಪಿದ್ದರು. ಇದೀಗ ಅಂಥದ್ದೇ ಘಟನೆ ಹಿರಿಯೂರಿನ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯದಂತ ಘಟನೆ ಸಂಭವಿಸಿಲ್ಲ.

ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಚಲಿಸುತ್ತಿದ್ದ ಕಂಟೈನರ್ ಲಾರಿ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬೆಂಗಳೂರು ಕಡೆಯಿಂದ ಚಿತ್ರದುರ್ಗದ ಕಡೆಗೆ ಬರುವಾಗ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿರಿಯೂರಿನ ಘಟನೆ ನೋಡಿದಾಗ ನೆಲಮಂಗಲ ಘಟನೆ ನಡೆದಾಗ ಹಿರಿಯರ ಮಾತು ನೆನಪಾಗದೆ ಇರಲಾರದು. ಆಯಸ್ಸು ಮುಗಿದಿದ್ದರೆ ಸಣ್ಣ ಹುಲ್ಲು ಕಡ್ಡಿ ಸಾಕು. ಎಡವಿದರೆ ಪ್ರಾಣ ಹೋಗುತ್ತೆ. ಆಯಸ್ಸು ಗಟ್ಟಿಯಾಗಿದ್ದರೆ ಬಂಡೆ ಕಲ್ಲು ಬಂದು ತಲೆ ಮೇಲೆ ಬಿದ್ದರು ಏನು ಆಗಲ್ಲ ಎಂಬುದು. ಎಷ್ಟೋ ಅಪಘಾತಗಳಲ್ಲಿ ಇದು ಉದಾಹರಣೆಯಾಗಿ ಕಂಡಿದೆ. ಹಲವರ ಆಯಸ್ಸು ಗಟ್ಟಿ ಇದ್ದರೆ ದುರಂತ ಸಂಭವಿಸಿದರು ಬದುಕುಳಿದ ಸಾಕ್ಷಿಗಳಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment