ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಹಿರಿಯೂರು : 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಏಪ್ರಿಲ್ 20 ರಂದು ಹಿರಿಯೂರು ಮತಕ್ಷೇತ್ರದಲ್ಲಿ 5 ನಾಮಪತ್ರ ಸಲ್ಲಿಕೆಯಾಗಿವೆ.
ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದಿಂದ ಸುಧಾಕರ್.ಡಿ, ಜ್ಯಾತ್ಯಾತೀತ ಜನತಾ ದಳದಿಂದ ಎಂ.ರವೀಂದ್ರಪ್ಪ, ಉತ್ತಮ ಪ್ರಜಾಕೀಯ ಪಕ್ಷದಿಂದ ಆರ್.ಧನು, ಆಮ್ ಆದ್ಮಿ ಪಕ್ಷದಿಂದ ಕೆ.ಟಿ.ತಿಪ್ಪೇಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಎನ್.ಓ.ರಂಗಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ.
ಇದುವರೆಗೂ ಒಟ್ಟು 16 ಅಭ್ಯರ್ಥಿಗಳಿಂದ 19 ನಾಮಪತ್ರಗಳು ಸಲ್ಲಿಕೆಯಾಗಿವೆ.
ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದಿಂದ ಸುಧಾಕರ್.ಡಿ 2,
ಭಾರತೀಯ ಜನತಾ ಪಕ್ಷದಿಂದ ಕೆ.ಪೂರ್ಣಿಮಾ 1,
ಜ್ಯಾತ್ಯಾತೀತ ಜನತಾ ದಳದಿಂದ ಎಂ.ರವೀಂದ್ರಪ್ಪ 2,
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಹೆಚ್.ಮಹೇಶ್ 2,
ಆಮ್ ಆದ್ಮಿ ಪಕ್ಷದಿಂದ ಕೆ.ಟಿ.ತಿಪ್ಪೇಸ್ವಾಮಿ 2 ಹಾಗೂ ಶ್ರೀದೇವಿ 1,
ಉತ್ತಮ ಪ್ರಜಾಕೀಯ ಪಕ್ಷದಿಂದ ಈ.ಪಾತಲಿಂಗಪ್ಪ 1 ಹಾಗೂ ಆರ್.ಧನು 1,
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ವಿನಯ್.ಎಸ್ 1,
ಬಹುಜನ ಸಮಾಜ ಪಾರ್ಟಿಯಿಂದ ಎನ್.ರಂಗಸ್ವಾಮಿ 1,
ರಿಪಬ್ಲಿಕ್ ಪಾರ್ಟಿ ಆಪ್ ಇಂಡಿಯಾ ಪಕ್ಷದಿಂದ ಬಿ.ಪುಟ್ಟಲಿಂಗಪ್ಪ 1,
ಪಕ್ಷೇತರ ಅಭ್ಯರ್ಥಿಗಳಾಗಿ ಬಿ.ಸುಧಾಕರ, ಬಿ.ಶಶಿಕಲಾ, ರಂಗಯ್ಯ.ಎಸ್, ಎನ್.ಓ.ರಂಗಸ್ವಾಮಿ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ.
ಏ.21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.24 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್