ಹಿರಿಯೂರು : ರಾತ್ರೋರಾತ್ರಿ ಕುವೆಂಪು, ಅಪ್ಪು ಪುತ್ಥಳಿಯನ್ನು  ತೆರವುಗೊಳಿಸಿದ ಅಧಿಕಾರಿಗಳು..!

1 Min Read

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.27 :  ಮಹಾಕವಿ ಕುವೆಂಪು ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿಯನ್ನು ಹಿರಿಯೂರು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಹಿರಿಯೂರು ನಗರದ ನಗರದ ರಂಜಿತಾ ಹೋಟೆಲ್ ಮುಂಭಾಗದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ಹಾಗೂ ಇಂದಿರಾ ಕ್ಯಾಂಟಿನ್ ಬಳಿ ನಟ ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಕ್ಟೋಬರ್ 3 ರಂದು ಅನಾವರಣಗೊಳಿಸಿದ್ದರು.

ಇದೀಗ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳು ರಾತ್ರೋರಾತ್ರಿ ಪುತ್ಥಳಿಗಳನ್ನು ತೆರವುಗೊಳಿಸಿದ್ದಾರೆ. ಮಾಹಿತಿ ತಿಳಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ಜೊತೆ ಕೆಲಕಾಲ ವಾಗ್ವಾದ ನಡೆಸಿದ್ದಾರೆ.

ಪುತ್ಥಳಿಗಳ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಕರವೇ ಪ್ರಧಾನ ಕಾರ್ಯದರ್ಶಿ ದಾದಾಪಿರ್ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಅಧಿಕಾರಿಗಳಿಂದಲೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *