ಹಿರಿಯೂರು | ನ.28ರಂದು ವಿದ್ಯುತ್ ವ್ಯತ್ಯಯ

1 Min Read

ಚಿತ್ರದುರ್ಗ. ನ. 27: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಹರಿಯಬ್ಬೆ ಮತ್ತು ಪಿ.ಡಿ.ಕೋಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ನ.28ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹರಿಯಬ್ಬೆ ಮತ್ತು ಪಿ.ಡಿ.ಕೋಟೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ  ವಿದ್ಯುತ್ ವಿತರಣಾ ಕೇಂದ್ರದ ಎಲ್ಲಾ  ಕೆ.ವಿ ಮಾರ್ಗಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಹರಿಯಬ್ಬೆ, ಧರ್ಮಪುರ, ಶ್ರವಣಗೆರೆ, ಬೆನಕನಹಳ್ಳಿ, ಸಕ್ಕರ, ಕೃಷ್ಣಪುರ, ಸೂಗೂರು, ಬುರುಡುಕುಂಟೆ, ಚಿಲ್ಲಹಳ್ಳಿ, ಈಶ್ವರಗೆರೆ, ಹೂವಿನಹೊಳೆ, ಅಬ್ಬಿನಹೊಳೆ, ಕಣಜನಹಳ್ಳಿ, ಬೇತೂರು, ಬೇತೂರು ಪಾಳ್ಯ, ವಿ.ಕೆ.ಗುಡ್ಡ, ಪಿ.ಡಿ.ಕೋಟೆ, ಖಂಡೇನಹಳ್ಳಿ, ಹಲಗಲದ್ದಿ, ಮದ್ದಿಹಳ್ಳಿ, ಹೊಸಕೆರೆ, ಅರಳಿಕರೆ, ಬಿ.ಕೆ.ಹಟ್ಟಿ ಹಾಗೂ ಸುತ್ತ ಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕಾಗಿ ಬೆಸ್ಕಾಂ ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

Share This Article
Enable Notifications OK No thanks