Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ನಾಳೆ ವಿದ್ಯುತ್ ವ್ಯತ್ಯಯ

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 14  : ಹಿರಿಯೂರು ಉಪವಿಭಾಗ ವ್ಯಾಪ್ತಿಯ ಹಿರಿಯೂರು 66/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ದಿನಾಂಕ 15 /10/2025 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹಿರಿಯರು ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪೀರ್ ಸಾಬ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿರಿಯೂರು ನಗರದಲ್ಲಿ ಹೊಸದಾಗಿ ಲಿಂಕ್ ಲೈನ್ ಮತ್ತು ರಸ್ತೆ ಅಗಲೀಕರಣ ಕಾಮಗಾರಿ ಇರುವ ಪ್ರಯುಕ್ತ ಸದರಿ ದಿನಾಂಕದಂದು ಹಿರಿಯೂರು 66/ 11 ವಿದ್ಯುತ್ ವಿತರಣಾ ಕೇಂದ್ರದ ಎಪ್- 9 ಹುಳಿಯಾರು ರಸ್ತೆ ಮತ್ತು ಎಫ್-2 ತೋಟಗಾರಿಕೆ ಫೀಡರ್ ಮತ್ತು ಎಫ್- 11 ಚಳ್ಳಕೆರೆ ವಾಟರ್ ಸಪ್ಲೈ 11ಕೆವಿ ಫೀಡರ್ ಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಹಿರಿಯೂರು ನಗರ, ಟಿಬಿ ವೃತ್ತ, ವೇದಾವತಿ ನಗರ, ಅವಧಾನಿನಗರ, ಲಕ್ಕವ್ವನಹಳ್ಳಿ ರಸ್ತೆ, ಕೆಎಂ ಕೊಟ್ಟಿಗೆ, ಹರಿಶ್ಚಂದ್ರ ಘಾಟ್, ಎಪಿಎಂಸಿ ಹಿಂಭಾಗ, ಚಿತ್ರದುರ್ಗ ಕುಡಿಯುವ ನೀರಿನ ಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಗ್ರಾಹಕರು ಸಹಕರಿಸಬೇಕು ಎಂದು ಇಂಜಿನಿಯರ್ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...