Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಮಾರ್ಚ್ 24 ರಿಂದ ರಾಜ ದುರ್ಗಾಪರಮೇಶ್ವರಿ ಜಾತ್ರೆ

---Advertisement---

ಸುದ್ದಿಒನ್, ಹಿರಿಯೂರು, ಮಾರ್ಚ್ 23 : ನಗರದ ಐತಿಹಾಸಿಕ ಗ್ರಾಮದೇವತೆ ಶ್ರೀ ರಾಜ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ ನಾಳೆಯಿಂದ (ಮಾರ್ಚ್.24)  ಆರಂಭವಾಗಲಿದೆ.

1944ರಲ್ಲಿ ಜಾತ್ರೆ ನಡೆದಿತ್ತು.  ಇದೀಗ 80 ವರ್ಷಗಳ ನಂತರ ಬಹು ದೊಡ್ಡ ಜಾತ್ರೆ ನಡೆಯುತ್ತಿದೆ. ಜಾತ್ರೆ ನಡೆಸುವ ಬಗ್ಗೆ ಅಮ್ಮನವರು ಅಪ್ಪಣೆ ನೀಡಿದ ಬಳಿಕ ದೇವಸ್ಥಾನ ಸಮಿತಿಯವರು ಹಾಗೂ ಭಕ್ತರು ನಿರ್ಧರಿಸಿ, ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಜಾತ್ರೆ ನಡೆಸುತ್ತಿದ್ದಾರೆ. ಮಾರ್ಚ್ 24 ಭಾನುವಾರದಿಂದ ಆರಂಭಗೊಂಡ ಜಾತ್ರಾ ಮಹೋತ್ಸವ  ಮಾರ್ಚ್ 27ರವರೆಗೆ  ನಾಲ್ಕು ದಿನಗಳ ಕಾಲ ನಡೆಯಲಿದೆ.

ಮಾರ್ಚ್ 24 ಬೆಳಿಗ್ಗೆ 10.30ಕ್ಕೆ ಚಪ್ಪರ ಶಾಸ್ತ್ರ, ಸಂಜೆ 7ಗಂಟೇಗೆ ಮದಲಂಗಿತ್ತಿ ಶಾಸ್ತ್ರ,
ಮಾ. 25ರಂದು 9ಗಂಟೆಗೆ ದೇವಿಯ ಮೂಲ ಕಳಸದೊಂದಿಗೆ ಗಂಗಾಪೂಜೆ, ನಡೆಮುಡಿ ಉತ್ಸವ, ಸಂಜೆ 6.15ಕ್ಕೆಪುಷ್ಪಾಲಂಕಾರದೊಂದಿಗೆ ಉಯ್ಯಾಲೋತ್ಸವ, ಮಾ. 26ರಂದು ಬೆಳಿಗ್ಗೆ 6ಕ್ಕೆ ದೇವಿಯ ಮೂಲ ಮೂರ್ತಿಗೆ ಮಹಾರುದ್ರಾಭಿಷೇಕ ಅರ್ಚನೆ, ಅಭಿಷೇಕ ಪೂಜೆ, ಬೆಳಿಗ್ಗೆ 7ಗಂಟೇಗೆ ಸುಮಂಗಲಯರಿಂದ ಮಾಡ್ಲಕ್ಕಿ ತುಂಬುವುದು ಹಾಗೂ ತಂಬಿಟ್ಟಿನ ಆರತಿ ಸೇವೆ ಹಾಗೂ ಕೊನೆಯ ದಿನ 27ರಂದು ಬೆಳಿಗ್ಗೆ 7ಗಂಟೆಯಿಂದ ಆರತಿ ಬಾನ ಮತ್ತು ದೇವಿಯ ಬೇವಿನ ಉಡಿಗೆ ಸೇವೆ ನಂತರ ರಾತ್ರಿ 8ಗಂಟೆ ಗೆ ಓಕುಳಿ ಮತ್ತು ಕಂಕಣ ವಿಸರ್ಜನೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...