Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು | ಮಾರ್ಚ್ 24 ರಿಂದ ರಾಜ ದುರ್ಗಾಪರಮೇಶ್ವರಿ ಜಾತ್ರೆ

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು, ಮಾರ್ಚ್ 23 : ನಗರದ ಐತಿಹಾಸಿಕ ಗ್ರಾಮದೇವತೆ ಶ್ರೀ ರಾಜ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ ನಾಳೆಯಿಂದ (ಮಾರ್ಚ್.24)  ಆರಂಭವಾಗಲಿದೆ.

1944ರಲ್ಲಿ ಜಾತ್ರೆ ನಡೆದಿತ್ತು.  ಇದೀಗ 80 ವರ್ಷಗಳ ನಂತರ ಬಹು ದೊಡ್ಡ ಜಾತ್ರೆ ನಡೆಯುತ್ತಿದೆ. ಜಾತ್ರೆ ನಡೆಸುವ ಬಗ್ಗೆ ಅಮ್ಮನವರು ಅಪ್ಪಣೆ ನೀಡಿದ ಬಳಿಕ ದೇವಸ್ಥಾನ ಸಮಿತಿಯವರು ಹಾಗೂ ಭಕ್ತರು ನಿರ್ಧರಿಸಿ, ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಜಾತ್ರೆ ನಡೆಸುತ್ತಿದ್ದಾರೆ. ಮಾರ್ಚ್ 24 ಭಾನುವಾರದಿಂದ ಆರಂಭಗೊಂಡ ಜಾತ್ರಾ ಮಹೋತ್ಸವ  ಮಾರ್ಚ್ 27ರವರೆಗೆ  ನಾಲ್ಕು ದಿನಗಳ ಕಾಲ ನಡೆಯಲಿದೆ.

ಮಾರ್ಚ್ 24 ಬೆಳಿಗ್ಗೆ 10.30ಕ್ಕೆ ಚಪ್ಪರ ಶಾಸ್ತ್ರ, ಸಂಜೆ 7ಗಂಟೇಗೆ ಮದಲಂಗಿತ್ತಿ ಶಾಸ್ತ್ರ,
ಮಾ. 25ರಂದು 9ಗಂಟೆಗೆ ದೇವಿಯ ಮೂಲ ಕಳಸದೊಂದಿಗೆ ಗಂಗಾಪೂಜೆ, ನಡೆಮುಡಿ ಉತ್ಸವ, ಸಂಜೆ 6.15ಕ್ಕೆಪುಷ್ಪಾಲಂಕಾರದೊಂದಿಗೆ ಉಯ್ಯಾಲೋತ್ಸವ, ಮಾ. 26ರಂದು ಬೆಳಿಗ್ಗೆ 6ಕ್ಕೆ ದೇವಿಯ ಮೂಲ ಮೂರ್ತಿಗೆ ಮಹಾರುದ್ರಾಭಿಷೇಕ ಅರ್ಚನೆ, ಅಭಿಷೇಕ ಪೂಜೆ, ಬೆಳಿಗ್ಗೆ 7ಗಂಟೇಗೆ ಸುಮಂಗಲಯರಿಂದ ಮಾಡ್ಲಕ್ಕಿ ತುಂಬುವುದು ಹಾಗೂ ತಂಬಿಟ್ಟಿನ ಆರತಿ ಸೇವೆ ಹಾಗೂ ಕೊನೆಯ ದಿನ 27ರಂದು ಬೆಳಿಗ್ಗೆ 7ಗಂಟೆಯಿಂದ ಆರತಿ ಬಾನ ಮತ್ತು ದೇವಿಯ ಬೇವಿನ ಉಡಿಗೆ ಸೇವೆ ನಂತರ ರಾತ್ರಿ 8ಗಂಟೆ ಗೆ ಓಕುಳಿ ಮತ್ತು ಕಂಕಣ ವಿಸರ್ಜನೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!