Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು ಗ್ರಾಮಾಂತರ ಪೊಲೀಸರಿಂದ 8 ಮಂದಿ ಮನೆಗಳ್ಳರ ಬಂಧನ :  12.75 ಲಕ್ಷದ ಬೆಳ್ಳಿ, ಬಂಗಾರ ವಶ

---Advertisement---

ಸುದ್ದಿಒನ್, ಚಿತ್ರದುರ್ಗ, (ಜು.26) : ಹಿರಿಯೂರು ಸೇರಿದಂತೆ ವಿವಿಧೆಡೆ ನಡೆದ ಮನೆಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ 8 ಮಂದಿ ಆರೋಪಗಳನ್ನು ಹಿರಿಯೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಒಟ್ಟು 04 ಪ್ರಕರಣಗಳು ಮತ್ತು ಹಿರಿಯೂರು ನಗರ ಠಾಣೆಯ 01 ಮನೆಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹೇಶ, ಬಾಲು, ರವಿಕುಮಾರ, ಸಲೀಂ ಬೇಗ್, ಅನ್ವರ್ ಭಾಷ, ಸಂತೋಷ ಕುಮಾರ್, ವಿನಾಯಕ ಚಾರಿ ಮತ್ತು ರಾಘವೇಂದ್ರ ಚಾರ್ ಬಂಧಿತ 8 ಮಂದಿ ಆರೋಪಿಗಳು. ಬಂಧಿತರಿಂದ ಒಟ್ಟಾರೆಯಾಗಿ 12 ಲಕ್ಷದ 75 ಸಾವಿರ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ.

ಹಿರಿಯೂರು ತಾಲ್ಲೂಕಿನ ಬಗ್ಗನಾಡು ಗ್ರಾಮ, ಆದಿವಾಲ ಫಾರಂ ಗ್ರಾಮದಲ್ಲಿ ಎರಡು ಬಾರಿ, ಮದ್ದೇರುಹಳ್ಳದ ಸಮೀಪದ ಮನೆ ಮತ್ತು ಹಿರಿಯೂರು ನಗರದಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.

ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಜೆ ಕುಮಾರಸ್ವಾಮಿ ಐ.ಪಿ.ಎಸ್, ರವರ ಮಾರ್ಗದರ್ಶನದಲ್ಲಿ ಶ್ರೀಮತಿ ಚೈತ್ರ ಡಿ.ವೈ.ಎಸ್.ಪಿ, ಹಿರಿಯೂರು ಉಪವಿಭಾಗ ರವರ ನೇತೃತ್ವದಲ್ಲಿ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಈ. ಕಾಳಿಕೃಷ್ಣ, ಪಿ.ಎಸ್.ಐ. ಸಚಿನ ಬಿರಾದಾರ, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಯವರಾದ ಸಿದ್ದಪ್ಪ, ಮಹಮ್ಮದ್ ಹನೀಫ್ ಹಡಗಲಿ, ಪರಮೇಶ, ಪ್ರವೀಣ್ ಕುಮಾರ, ಪ್ರಸನ್ನ ಟಿ, ಶಶಿಧರ ಟಿ.ಎಸ್, ಜೀಪ್ ಚಾಲಕ ಹರ್ಷ, ಹಿರಿಯೂರು ನಗರ ಪೆÇಲೀಸ್ ಠಾಣೆ ದೇವೇಂದ್ರಪ್ಪ, ಸಿದ್ದಲಿಂಗೇಶ್ವರ ಹಾಗೂ ಇತರೆ ಠಾಣಾ ಸಿಬ್ಬಂದಿಯವರನ್ನೊಳಗೊಂಡ ತಂಡದವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಅವರಿಂದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.

ಹಿರಿಯೂರು ಗ್ರಾಮಾಂತರ ಪೊಲೀಸರ ಈ ಯಶಸ್ವಿ ಕಾರ್ಯಾಚರಣೆಯನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಅವರು ಶ್ಲಾಘಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment