Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಶಾಲಾ ದಾಖಲಾತಿ ಪ್ರಕ್ರಿಯೆ ಪಾರದರ್ಶಕವಾಗಿರಲಿ :  ಬಿಇಓ ಸೂಚನೆ

---Advertisement---

ಸುದ್ದಿಒನ್, ಹಿರಿಯೂರು, ಮೇ. 09 : ನಗರದ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶಾಲಾ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದ್ದು ಇಲಾಖೆ ನಿಯಮಗಳನ್ನು ಪಾಲನೆ ಮಾಡಿಕೊಂಡು ಮಾರ್ಗಸೂಚಿಯಂತೆ ಮಕ್ಕಳ ದಾಖಲಾತಿ ಮಾಡಿಕೊಳ್ಳಬೇಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎಂ ತಿಪ್ಪೇಸ್ವಾಮಿ ಖಾಸಗಿ ಶಾಲೆಯ ಆಡಳಿತ ಮಂಡಳಿಯವರಿಗೆ ಸೂಚನೆ ನೀಡಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು ಈಗಾಗಲೇ ದಾಖಲಾತಿ ಪ್ರಕ್ರಿಯೆಗೆ ಮೊದಲೇ ಒಂದು ಸಭೆಯನ್ನು ನಡೆಸಿದ್ದು, ಎಲ್ಲ ಶಾಲೆಗಳಿಗೂ ಇಲಾಖಾ ನಿಯಮಗಳ ಬಗ್ಗೆ ಸೂಕ್ತ ತಿಳುವಳಿಕೆ ನೀಡಲಾಗಿದೆ. ಶಾಲೆಯಲ್ಲಿ ಸಂಗ್ರಹಿಸುವ ಶುಲ್ಕದ ವಿವರವನ್ನು ಪ್ರಧಾನವಾಗಿ ಕಾಣುವಂತೆ ಫ್ಲೆಕ್ಸ್ ನಲ್ಲಿ ಅಳವಡಿಿರುವುದು. ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ವಹಿಸಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇರುದ್ರಪ್ಪ, ಶಿಕ್ಷಣ ಸಂಯೋಜಕರಾದ ಪುಟ್ಟಸ್ವಾಮಿ, ಸೈಯದ್ ಜಾಫರ್, ನಾಗರಾಜ್, ಶಿವಾನಂದ್, ರಂಗಸ್ವಾಮಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಾದ ನಿಜಗುಣಮೂರ್ತಿ, ಚಿದಾನಂದ್, ನಾಗರಾಜ್, ಪ್ರಸನ್ನ ಮತ್ತು ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಮತ್ತು ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...