Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು | ಶಾಲಾ ಪ್ರಾರಂಭೋತ್ಸವ ಹಾಗೂ ಸಮವಸ್ತ್ರ, ಪುಸ್ತಕ ವಿತರಣಾ ಕಾರ್ಯಕ್ರಮ

---Advertisement---

 

ಚಿತ್ರದುರ್ಗ, ಮೇ. 31 :  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 2024-25 ನೇ ಸಾಲಿನ ಶಾಲೆಯ ಪ್ರಾರಂಭೋತ್ಸವದಲ್ಲಿ ಪೋಷಕರೊಂದಿಗೆ ಮಕ್ಕಳಿಗೆ ಸಿಹಿ ಹಂಚಿ ಸ್ವಾಗತಿಸಲಾಯಿತು ಹಾಗೆ ಉಚಿತ ಸಮವಸ್ತ್ರ, ಪುಸ್ತಕ ವಿತರಣೆ ಮಾಡಲಾಯಿತು, ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕೆಂದು ಪೋಷಕರಿಗೆ ತಿಳಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ಈ ವರ್ಷದ ಎಸ್ ಎಸ್ ಎಲ್ ಸಿ ಫಲಿತಾಂಶ ಗಮನಿಸಿದರೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ದಾಖಲೆ ಸೃಷ್ಟಿಸಿದ ಅಂಕಿತಾ ಎಂಬ ವಿದ್ಯಾರ್ಥಿನಿ ಓದಿ ಸಾಧನೆ ಮಾಡಿದ್ದು ಸರ್ಕಾರಿ ಶಾಲೆ ಎಂಬುದನ್ನು ನಾವು ಯಾರು ಕೂಡ ಮರೆಯಬಾರದು, ಇಂತಹ ಗುಣಮಟ್ಟದ ಶಿಕ್ಷಣಕ್ಕೆ ಮತ್ತೊಂದು ಸಾಕ್ಷಿ ಬೇಕಾ ಎಂದು ತಿಳಿಸಿದರು, ಹಾಗಾಗಿ ಎಲ್ಲ ಪೋಷಕರು ನಿಮ್ಮ ಎಲ್ಲ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಬೇಕು ಎಂದು ಶಾಲೆಯ ಮುಖ್ಯ ಶಿಕ್ಷಕರು ಆದ ಶ್ರೀಮತಿ ಸುಜಾತ ರವರು ಪೋಷಕರಿಗೆ ಕಿವಿ ಮಾತು ಹೇಳಿದರು.

ಈ ಸಂದರ್ಭದಲ್ಲಿ SDMC ಅಧ್ಯಕ್ಷರಾದ ಶ್ರೀ ಮಹೇಶ್.ವೈ. ಸದಸ್ಯರಾದ ಕೃಷ್ಣನಾಯ್ಕ , ಭಾಗ್ಯಮ್ಮ , ಶಕುಂತಲಾ , ರಹಮತ್ ಉನ್ನಿಸಾ , ಶಾಲೆಯ ಮುಖ್ಯಶಿಕ್ಷಕರಾದ ಶ್ರೀಮತಿ ಸುಜಾತ, ಸಹ ಶಿಕ್ಷಕರಾದ ಗೀತಾ , ರೇಣುಕಮ್ಮ , ಉಷಾರಾಣಿ , ಹೇಮಲತಾ , ರಾಧ , ಹಾಗೂ ಪೋಷಕರು ಭಾಗವಹಿಸಿದ್ದರು ..

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment