Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು‌ : ಹೆತ್ತ ತಾಯಿಯನ್ನೇ ಕೊಂದ ಮಗ

---Advertisement---

ಹಿರಿಯೂರು, ಮಾರ್ಚ್. 28 : ಕುಡಿತ ಅನ್ನೋದು ತಾನೂ ಏನು ಮಾಡ್ತಾ ಇದ್ದೀನಿ ಅನ್ನೋದನ್ನೇ ಮರೆಸಿ ಬಿಡುತ್ತದೆ. ಇಲ್ಲೊಬ್ಬ ಕುಡಿದು ತನ್ನ ತಾಯಿಯ ಪ್ರಾಣವನ್ನೇ ತೆಗೆದಿದ್ದಾನೆ. ಈ ಘಟನೆ ನಡೆದಿರೋದು ಹಿರಿಯೂರು ತಾಲ್ಲೂಕಿನ ಹುಲಗಲಕುಂಟೆ ಗ್ರಾಮದಲ್ಲಿ. ಕುಡಿದ ಮತ್ತಿನಲ್ಲಿದ್ದ ನೀಚ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.

ಕುಡಿತವನ್ನ ಅಭ್ಯಾಸ ಮಾಡಿಕೊಂಡಿದ್ದ ಚಿತ್ರಲಿಂಗ ಎಂಬಾತನೇ ಇಂಥ ಕೃತ್ಯ ಮಾಡಿರುವುದು. ಈ ಚಿತ್ರಲಿಂಗನಿಗೆ ಈಗ 40 ವರ್ಷ ವಯಸ್ಸು. ಈತನಿಂದ ಕೊಲೆಯಾದ ದುರ್ದೈವ ತಾಯಿ, ಗಂಗಮ್ಮ. ಮೃತ ಮಹಿಳೆಗೆ 65 ವರ್ಷ. ಚಿತ್ರಲಿಂಗ ಯಾವಾಗಲೂ ಮನೆಗೆ ಕುಡಿದು ಬರುತ್ತಿದ್ದ. ಸುಮ್ಮ ಸುಮ್ಮನೆ ಜಗಳ ಮಾಡುತ್ತಿದ್ದ.ಇಂದು ಕೂಡ ಕುಡಿದು ಜಗಳ ಮಾಡಿದ್ದಾನೆ.

ಈ ವೇಳೆ ಮತ್ತಿನಲ್ಲಿ ತಾಯಿಯನ್ನೇ ಕೊಂದಿದ್ದಾನೆ. ಈ ಘಟನೆ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಚಿತ್ರಲಿಂಗನನ್ನು ಪೊಲೀಸರು ಬಂಧಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment