ಹಿರಿಯೂರು | ಶಿಕ್ಷಕ ಅಮಾನತು

0 Min Read

ಸುದ್ದಿಒನ್, ಹಿರಿಯೂರು, ಡಿಸೆಂಬರ್. 25 : ತಾಲೂಕಿನ ಬಬ್ಬೂರು ಫಾರಂನ ಸರ್ಕಾರಿ ಶಾಲೆಯ ಶಿಕ್ಷಕ ಬಿ. ರಮೇಶ್ ಅವರನ್ನು ಅಮಾನತು ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ. ತಿಪ್ಪೇಸ್ವಾಮಿ ಆದೇಶ ಹೊರಡಿಸಿದ್ದಾರೆ.

ಶಾಲೆಯಲ್ಲಿ 4 ನೇ ತರಗತಿ ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಲ್ಲಿ ತುಳಿದು ಬೆನ್ನಿಗೆ ಬರೆ ಬರುವ ಹಾಗೆ ದೈಹಿಕ ಹಲ್ಲೆ ನಡೆಸಿರುತ್ತಾರೆಂದು ಆರೋಪಿಸಿ ಭಾರತೀಯ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ದೂರಿನ ಮೇರೆಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *