ಹಿರಿಯೂರು | ಮೂರು ಲಕ್ಷ ಹಣ ಕದ್ದು ಕಳ್ಳರು ಪರಾರಿ : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

0 Min Read

 

ಸುದ್ದಿಒನ್, ಹಿರಿಯೂರು, ಡಿಸೆಂಬರ್.01 :  ಕಾರಿನಲ್ಲಿದ್ದ ಹಣವನ್ನು ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಕದ್ದೊಯ್ದ ಪ್ರಕರಣ ನಗರದ ಲಕ್ಷ್ಮಮ್ಮ ಬಡಾವಣೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ನಗರದ ಕೃಷ್ಣಕುಮಾರ್ ಎಂಬುವರು ಬ್ಯಾಂಕ್ ನಿಂದ 3,5,000 ನಗದು ಹಣವನ್ನು ಬ್ಯಾಗಿನಲ್ಲಿ ಮನೆಗೆ ತಂದಿದ್ದಾರೆ. ಇವರನ್ನು ಬೈಕ್ ನಲ್ಲಿ ಹಿಂಬಾಲಿಸಿದ ಇಬ್ಬರು ಕಳ್ಳರು ಹಣದ ಬ್ಯಾಗನ್ನು ಕದ್ದು ಪರಾರಿಯಾಗಿದ್ದಾರೆ.

ಕಳ್ಳತನವಾದ ಘಟನೆಯು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದ್ದು, ಈ ಕುರಿತು ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *