Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು | ರಸ್ತೆ ಅಪಘಾತದಲ್ಲಿ ಇಬ್ಬರು ಸಾವು…!

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು, ಜೂ.01 : ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಅಶೋಕ್ ಲೇಲ್ಯಾಂಡ್ ಲಗೇಜ್ ವಾಹನ  ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಆರ್.ಕೆ. ಪವರ್ ಜಿನ್ ಬಳಿ  ನಡೆದಿದೆ.

ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್(55) ಹಾಗೂ ಬೆಳೆಗೆರೆ ಗ್ರಾಮದ ಶಿವಲಿಂಗಪ್ಪ (65) ಮೃತರು ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಳ್ಳಕೆರೆ ತಾಲೂಕಿನ ತನ್ನ ಗ್ರಾಮದಿಂದ ಹಿರಿಯೂರು ಕುರಿ ಸಂತೆಗೆ ಕುರಿ ವ್ಯಾಪಾರ ಮಾಡಲು ಅಶೋಕ್ ಲೈಲ್ಯಾಂಡ್ ಲಗೇಜ್ ವಾಹನದಲ್ಲಿ ಕುರಿ ತುಂಬಿಕೊಂಡು ಬರುತ್ತಿರುವಾಗ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ

ಚಿತ್ರದುರ್ಗ. ಜುಲೈ.03:   ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸರ್ಕಾರದ ಒಂದು ಪ್ರತಿಷ್ಠಿತ ಸಂಸ್ಥೆಯಾಗಿದ್ದು, ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಗೆ ಹೆಸರುವಾಸಿಯಾದ ಆಸ್ಪತ್ರೆಯಾಗಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಹಾಗೂ ಹೊರ ರಾಜ್ಯಗಳ ಸಾರ್ವಜನಿಕರು ಕ್ಯಾನ್ಸರ್ ಚಿಕಿತ್ಸೆಗೆ ಕಿದ್ವಾಯಿ

ಜುಲೈ 5 ರಿಂದ 11 ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 02 : ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ

10 ಸಾವಿರ ಶಿಕ್ಷಕರನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧಾರ : ಯಾವಾಗಿಂದ ಆರಂಭವಾಗಬಹುದು..?

ಬೆಂಗಳೂರು: ಶಿಕ್ಷಕ ವೃತ್ತಿ ಮಾಡಬೇಕೆಂದುಕೊಂಡವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸರ್ಕಾರ 10 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನಿರ್ಧಾರ ಮಾಡಿದೆ‌. ಈ ಸಂಬಂಧ ಈಗಾಗಲೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದೆ. ಜೊತೆಗೆ45

error: Content is protected !!