Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ರಸ್ತೆ ಅಪಘಾತದಲ್ಲಿ ಇಬ್ಬರು ಸಾವು…!

---Advertisement---

ಸುದ್ದಿಒನ್, ಹಿರಿಯೂರು, ಜೂ.01 : ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಅಶೋಕ್ ಲೇಲ್ಯಾಂಡ್ ಲಗೇಜ್ ವಾಹನ  ಡಿಕ್ಕಿಯಾದ ರಭಸಕ್ಕೆ ಇಬ್ಬರು ಕುರಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಆರ್.ಕೆ. ಪವರ್ ಜಿನ್ ಬಳಿ  ನಡೆದಿದೆ.

ಮೃತರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್(55) ಹಾಗೂ ಬೆಳೆಗೆರೆ ಗ್ರಾಮದ ಶಿವಲಿಂಗಪ್ಪ (65) ಮೃತರು ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಳ್ಳಕೆರೆ ತಾಲೂಕಿನ ತನ್ನ ಗ್ರಾಮದಿಂದ ಹಿರಿಯೂರು ಕುರಿ ಸಂತೆಗೆ ಕುರಿ ವ್ಯಾಪಾರ ಮಾಡಲು ಅಶೋಕ್ ಲೈಲ್ಯಾಂಡ್ ಲಗೇಜ್ ವಾಹನದಲ್ಲಿ ಕುರಿ ತುಂಬಿಕೊಂಡು ಬರುತ್ತಿರುವಾಗ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment