Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು | ವಿಜೃಂಭಣೆಯಿಂದ ಜರುಗಿದ ಶ್ರೀ ಕಣಿವೆ ಮಾರಮ್ಮನ ರಥೋತ್ಸವ

---Advertisement---

ಸುದ್ದಿಒನ್, ಹಿರಿಯೂರು, ಮೇ. 10  : ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಮುಂಭಾಗದಲ್ಲಿರುವ ಶ್ರೀ ಕಣಿವೆ ಮಾರಮ್ಮನ ಬ್ರಹ್ಮ ರಥೋತ್ಸವ ಶುಕ್ರವಾರ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.

ಅಲಂಕರಿಸಿದ ರಥದಲ್ಲಿ ಉತ್ಸವಮೂರ್ತಿಯನ್ನು ಮೆರವಣಿಗೆಯೊಂದಿಗೆ ರಥದಲ್ಲಿ ಪ್ರತಿಷ್ಠಾಪಿಸುತ್ತಿದ್ದಂತೆಯೇ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿಭಾವ ಮೆರೆದರು. ಅಲ್ಲದೆ ರಥಕ್ಕೆ ಬಾಳೆಹಣ್ಣು ಎಸೆದು ಹರಕೆ ತಿರಿಸುವ ಮೂಲಕ ತನ್ನ ಇಷ್ಟಾರ್ಥಗಳನ್ನು ಪೂರೈಸಿದರು.

ಮಾರಮ್ಮನ ಜಾತ್ರೆಗೆ ಬಿಸಿಲನ್ನು ಲೆಕ್ಕಿಸದೆ ಈ ಬಾರಿ ಜನಸಾಗರವೇ ಹರಿದು ಬಂದಿತ್ತು. ಟ್ರಾಕ್ಟರ್, ಆಟೋ, ಬಸ್, ಬೈಕ್, ಕಾರು, ಇನ್ನೀತರ ವಾಹನಗಳಲ್ಲಿ ಹಿರಿಯೂರು, ಹೊಸದುರ್ಗ, ಚಿತ್ರದುರ್ಗ, ರಾಜ್ಯದ ವಿವಿಧ ಭಾಗಗಳಿಂದ ಸೇರಿದಂತೆ ಹೊರ ರಾಜ್ಯದಿಂದಲೂ ಭಕ್ತರ ದಂಡೇ ರಥೋತ್ಸವದಲ್ಲಿ ಭಾಗಿಯಾಗಿದ್ದರು.

ದೇವಾಲಯ ಹಿನ್ನೆಲೆ : ನೂರಾರು ವರ್ಷಗಳ ಇತಿಹಾಸವಿರುವ ಕಣಿವೆ ಮಾರಮ್ಮದೇವಿಯು ವಾಣಿ ವಿಲಾಸ ಜಲಾಶಯ ಅಣೆಕಟ್ಟೆಯ ರಕ್ಷಕಿ ಎಂಬ ನಂಬಿಕೆ ಇದೆ. ಎರಡು ಗುಡ್ಡಗಳ ನಡುವಿನ ಪ್ರದೇಶದಲ್ಲಿ ವಾಣಿ ವಿಲಾಸ ಜಲಾಶಯ ಅಣೆಕಟ್ಟೆ ನಿರ್ಮಿಸಿದ್ದು, ಎರಡು ಗುಡ್ಡಗಳ ಕಣಿವೆಯಂತಹ ಪ್ರದೇಶದಲ್ಲಿ ಈ ದೇಗುಲ ಇರುವ ಕಾರಣ ಕಣಿವೆ ಮಾರಮ್ಮ ಎಂಬ ಹೆಸರು ಬಂದಿದೆ. ಇಲ್ಲಿ ಮೇ ತಿಂಗಳಲ್ಲಿ ಕಣಿವೆ ಮಾರಮ್ಮನ ಜಾತ್ರೆ ನಡೆಯುತ್ತದೆ.

ಯಾವುದೇ ಕೆಲಸ ಪ್ರಾರಂಭಕ್ಕೂ ಮೊದಲು ದೇವರನ್ನು ನೆನೆದರೆ ಅವಳು ಕಾಪಾಡಿಯೇ ಕಾಪಾಡುತ್ತಾಳೆ ಅನ್ನೋ ನಂಬಿಕೆ ನಮ್ಮಲ್ಲಿ ಮೊದಲಿನಿಂದಲೂ ಬೆಳೆದು ಬಂದಿದೆ. ಆ ಕೆಲಸ ಚಿಕ್ಕದೇ ಆಗಲಿ ಅಥವಾ ದೊಡ್ಡದೇ ಆಗಲಿ. ಇದಕ್ಕೆ ಸಾಕ್ಷಿಯಾಗಿ ನಿಂತಿರೋದೆ ಈ ದೇವಾಲಯ. ಇಲ್ಲಿ ತಾಯಿ ಅಂಬಿಕೆನೇ ಆಣೆಕಟ್ಟು ಕಾಯೋಕೆ ನಿಂತಿದ್ದಾಳೆ.

ಹೌದು ಇದೇ ಈ ದೇವಾಲಯದ ವಿಶೇಷತೆಯಾಗಿದೆ. ಇಲ್ಲಿ ತಾಯಿಯ ಪಾದಕ್ಕೆ ತಾಗಿ ಆಣೆಕಟ್ಟು ನಿಂತಿದೆ. ಮಾರಿಕಾಂಬೆಯೇ ತನ್ನ ಪಾದದ ಮೂಲಕ ಆ ಆಣೆಕಟ್ಟು ಹಿಡಿದು ನಿಂತಿದ್ದಾಳೆ ಅನ್ನೋದು ಭಕ್ತರ ನಂಬಿಕೆ. ಅದಕ್ಕೆ ಇಲ್ಲಿನ ಆಣೆಕಟ್ಟಿಗೆ ಮಾರಿಕಣಿವೆ ಡ್ಯಾಂ ಅಂತಾನೆ ಕರಿಯೋದು. ಇದು ಮಾರಿ ಕಣಿವೆ ಡ್ಯಾಂ ಎಂದು ಕರಿಸಿಕೊಳ್ಳೋ ವಾಣಿವಿಲಾಸ ಆಣೆಕಟ್ಟಿನ ಬಳಿಯಿರೋ ಮಾರಿಕಾಂಬ ಅಥವಾ ಕಣಿವೆ ಮಾರಮ್ಮ ದೇವಾಲಯ. ಆಣೆಕಟ್ಟಿಗೆ ತಾಗಿಕೊಂಡೇ ಈ ದೇವಾಲಯ ಇದೆ. ಇಲ್ಲಿರುವ ಮಾರಿಕಾಂಬೆ ಈ ಡ್ಯಾಂಗೆ ಯಾವುದೇ ರೀತಿಯ ತೊಂದರೆ ಬರದ ರೀತಿಯಲ್ಲಿ ಕಾಯುತ್ತಾಳೆ ಅನ್ನೋದು ಇಲ್ಲಿಯ ಜನರ ನಂಬಿಕೆಯಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment