Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೀಸಲಾತಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು : 40 ವರ್ಷಗಳ ಸುದೀರ್ಘ ಕಠಿಣ ಹೋರಾಟಕ್ಕೆ ಸಿಕ್ಕ ಪ್ರತಿಫಲ : ಹರಳಯ್ಯ ಸ್ವಾಮೀಜಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಒಳ ಮೀಸಲಾತಿ ನೀಡುವ ಅಧಿಕಾರ ಆಯಾ ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿರುವುದನ್ನು ಹರಳಯ್ಯ ಸ್ವಾಮೀಜಿ ಸ್ವಾಗತಿಸಿದ್ದಾರೆ.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸ್ವಾಮೀಜಿ ಒಳ ಮೀಸಲಾತಿಗಾಗಿ ಕಳೆದ ಮೂವತ್ತು ನಲವತ್ತು ವರ್ಷಗಳಿಂದಲೂ ವಿವಿಧ ಸಂಘಟನೆಗಳು, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಹಾಗೂ ಅನೇಕ ಮಠಾಧೀಶರುಗಳು ನಡೆಸಿದ ಹೋರಾಟಕ್ಕೆ ಸುಪ್ರಿಂ ಕೊರ್ಟ್ ತೀರ್ಪು ಶಕ್ತಿ ತುಂಬಿದಂತಿದೆ. ಪಾದಯಾತ್ರೆ, ಸೈಕಲ್ ಜಾಥ, ಅರೆಬೆತ್ತಲೆ ಮೆರವಣಿಗೆ, ಪಂಜಿನ ಮೆರವಣಿಗೆ ಡಿ.ಸಿ.ಕಚೇರಿಗೆ ಮುತ್ತಿಗೆ, ಶಾಸಕರ ಮನೆ ಎದುರು ಧರಣಿ, ಮೈಮೇಲೆ ಮಲ ಸುರಿದುಕೊಂಡಿರುವ ಪ್ರಕರಣಗಳು ಅಲ್ಲಲ್ಲಿ ಜರುಗಿದೆ. ಕಠಿಣ ಹೋರಾಟಕ್ಕೆ ಸಿಕ್ಕ ಪ್ರತಿಫಲ. ರಾಜ್ಯದ ಮುಖ್ಯಮಂತ್ರಿ ತಡ ಮಾಡದೆ ಸುಪ್ರೀಂ ಕೋರ್ಟ್ ತೀರ್ಪಿನನ್ವಯ ಆದೇಶ ಹೊರಡಿಸಬೇಕು. ಇಲ್ಲವಾದಲ್ಲಿ ರೊಚ್ಚಿಗೇಳಬೇಕಾಗುತ್ತದೆಂದು ಎಚ್ಚರಿಸಿದರು.

ಹನುಮಂತಪ್ಪ ದುರ್ಗ ಮಾತನಾಡಿ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಪರಿಶಿಷ್ಟ ಜಾತಿಯಲ್ಲಿನ ಅಸ್ಪøಶ್ಯರನ್ನು ಗುರಿತಿಸಿ ಆಯಾ ಜಾತಿಗೆ ಅನುಗುಣವಾಗಿ ಮೀಸಲಾತಿ ನೀಡುವಂತೆ ಆಯಾ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಪ್ರೀಂ ಕೋರ್ಟ್ ತೀರ್ಪಿನಂತೆ ಆದೇಶ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.
ನಗರಂಗೆರೆ ದೇವರಾಜ್, ನ್ಯಾಯವಾದಿ ಸುರೇಶ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment