Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐತಿಹಾಸಿಕ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಭರದ ಸಿದ್ದತೆ ; ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಸಂಪೂರ್ಣ ಮಾಹಿತಿ…!

Facebook
Twitter
Telegram
WhatsApp

 

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ .ಫೆ.27: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದ ಶ್ರೀಗುರು ತಿಪ್ಪೇರುದ್ರ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಮೂಲ ಸೌಕರ್ಯಕ್ಕೆ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.

ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಾಯಕನಹಟ್ಟಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಜಾತ್ರೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾರ್ಚ್ 3 ರಿಂದ 13ರ ವರೆಗೆ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಮಾರ್ಚ್ 10 ರಂದು ಜರುಗುವ ದೊಡ್ಡ ರಥೋತ್ಸವಕ್ಕೆ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ವಿವಿಧಡೆಗಳಿಂದ ಸುಮಾರು 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಭಾಗವಹಿಸಲಿದ್ದಾರೆ.

ಈ ಹಿನ್ನಲೆಯಲ್ಲಿ ಕುಡಿಯುವ ನೀರು, ಆರೋಗ್ಯ, ನೈರ್ಮಲ್ಯ, ಸಮರ್ಪಕ ವಿದ್ಯುತ್ ವ್ಯವಸ್ಥೆ, ಬಂದೋಬಸ್ತ್, ಸಾರಿಗೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು. ಭಕ್ತಾಧಿಗಳಿಗೆ ಕಿರಿಕಿರಿ ಹಾಗೂ ಕಿರುಕುಳವಾಗಬಾರದು. ಜನರು ಸಂತೋಷದಿಂದ ಜಾತ್ರೆಯಲ್ಲಿ ಭಾಗವಹಿಸುವಂತಾಗಬೇಕು ಎಂದರು.

40 ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ: ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರ ಬಳಕೆ ಹಾಗೂ ಕುಡಿಯವ ನೀರು ಸರಬರಾಜು ಮಾಡಲು 40  ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. 6 ಕಡೆಗಳಲ್ಲಿ ಬೋರ್ ವೆಲ್‍ಗಳನ್ನು ಗುರುತಿಸಲಾಗಿದೆ. ನೀರು ಸಾಗಣಿಕೆ ನಡೆಸುವ ಟ್ಯಾಂಕರ್‍ಗಳನ್ನು ಸ್ವಚ್ಛಗೊಳಿಸಿ, ನೈರ್ಮಲೀಕರಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೀಲಾವತಿ ಸಭೆಗೆ ಮಾಹಿತಿ ನೀಡಿದರು.

ಈ ಬೋರ್‍ವೆಲ್‍ಗಳ ನೀರು ಕುಡಿಯಲು ಯೋಗ್ಯವಾಗಿದೇ ಎಂದು ಪರಿಶೀಲಿಸಿ ವರದಿ ನೀಡಲು ಆರೋಗ್ಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸರ್ಕಾರಿ ಕಚೇರಿ ಶೌಚಾಲಯಗಳು ಸಾರ್ವಜನಿಕರ ಬಳಕೆಗೆ ಲಭ್ಯ: ನಾಯಕನಟ್ಟಿ ಪಟ್ಟಣದ 5 ಕಡೆ ತಾತ್ಕಾಲಿಕವಾಗಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಕ್ರಮವಹಿಸಬೇಕು. ಇದರೊಂದಿಗೆ ಜಾತ್ರಾ ಮಹೋತ್ಸವ ಜರುಗುವ ದಿನಗಳಂದು ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಿಸಲು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಸೂಚನೆ ನೀಡಿದರು.

152 ಆರೋಗ್ಯ ಸಿಬ್ಬಂದಿ ನೇಮಕ: ಜಾತ್ರ ಮಹೋತ್ಸವದ ಅಂಗವಾಗಿ ಆರೋಗ್ಯ ಇಲಾಖೆಯಿಂದ 152 ಆರೋಗ್ಯ ಸಿಬ್ಬಂದಿಗಳನ್ನು  ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಇದರಲ್ಲಿ 16 ಜನರ ವೈದ್ಯಾಧಿಕಾರಿಗಳು ಇರಲಿದ್ದಾರೆ. 4 ಕಡೆ ತಾತ್ಕಾಲಿಕವಾಗಿ ಕ್ಲಿನಿಕ್‍ಗಳನ್ನು ತೆರಯಲಾಗುವುದು. ಆಹಾರ ಹಾಗೂ ನೈರ್ಮಲ್ಯ ಮೇಲ್ವಿಚಾರಣೆಗಾಗಿ 8 ತಂಡಗಳು, ತುರ್ತು ಸೇವೆಗಳಿಗಾಗಿ 4 ಆಂಬ್ಯುಲೆನ್ಸ್, ಕೋವಿಡ್ ಲಸಿಕಾ ಕೇಂದ್ರ ಹಾಗೂ ಆರೋಗ್ಯ ಇಲಾಖೆ ಶಿಕ್ಷಣ, ಮಾಹಿತಿ ಸಂವಹನ ಮಳಿಗೆಯನ್ನು ಜಾತ್ರೆಯಲ್ಲಿ ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಸಭೆಯಲ್ಲಿ ಮಾಹಿತಿ ನೀಡಿದರು.

ಸಿಸಿ ಟಿವಿ ಕಣ್ಗಾವಲು: ಜಾತ್ರಾ ಮಹೋತ್ಸವದ ಬಂದೋಬಸ್ತ್‍ಗಾಗಿ 2550 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಯಾವುದೇ ಅಹಿತಕರ ಘಟನೆ, ಕಳ್ಳತನ ಸಂಭವಿಸದಂತೆ ತಡೆಯಲು ಪಟ್ಟಣದ 30 ಕಡೆ ಸಿಸಿ ಟಿವಿ ಕ್ಯಾಮರಾ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. 3 ಕಡೆ ವಾಚ್ ಟವರ್, 22 ಕಡೆ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು.

ಆಟೋದರ ನಿಗದಿ: ನಾಯಕನಹಟ್ಟಿ ಸಂಪರ್ಕಿಸುವ ಏಳು ಕಡೆಗಳಲ್ಲಿ ಚೆಕ್ ಪೋಸ್ಟ್ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಆಟೋಗಳು ಸಂಚರಿಸಿವೆ. ಗ್ರಾಹಕರಿಗೆ ಹೊರೆಯಾಗದಂತೆ ಆಟೋ ಚಾಲಕರೊಂದಿಗೆ ಸಮಾಲೋಚಿಸಿ ನಿರ್ದಿಷ್ಟ ದರವೊಂದನ್ನು ನಿಗದಿಪಡಿಸಲು ಕ್ರಮಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಯಿತು.

ಮುಕ್ತಿ ಬಾವುಟ ಹರಾಜು ಕೂಗಲು ನೋಂದಣಿ: ಮಾರ್ಚ್ 10 ರಂದು ಜರುಗುವ ದೊಡ್ಡ ರಥೋತ್ಸವಕ್ಕೂ ಮುನ್ನ ಜರುಗವ ಮುಕ್ತಿ ಬಾವುಟ ಹರಾಜಿನಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಕೊಳ್ಳಬೇಕು. ನೊಂದಣಿ ಸಮಯದಲ್ಲಿ ಬ್ಯಾಂಕ್ ಚೆಕ್‍ಬುಕ್ ಹಾಳೆಯೊಂದನ್ನು ದೇವಸ್ಥಾನದ ಸಮಿತಿಗೆ ನೀಡಬೇಕು. ಹರಾಜು ಕೂಗಿ ಮುಕ್ತಿ ಬಾವುಟ ಪಡೆದವರು ಮೂರು ತಿಂಗಳ ಒಳಗಾಗಿ ಹಣ ಸಂದಾಯ ಮಾಡುವಂತೆ ನಿಯಮಗಳನ್ನು ರೂಪಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ಪ್ರಾಣಿಬಲಿ ಹಾಗೂ ಮದ್ಯ ಮಾರಾಟ ನಿಷೇಧ: ಜಾತ್ರಾ ಮಹೋತ್ಸವದಲ್ಲಿ ಕಡ್ಡಾಯವಾಗಿ ಪ್ರಾಣಿಬಲಿಯಂತಹ ಆಚರಣೆಗಳನ್ನು ನಿಷೇಧಿಸಲಾಗಿದೆ. ಪೊಲೀಸ್, ಪಟ್ಟಣ ಪಂಚಾಯತಿ ಹಾಗೂ ಪಶು ಇಲಾಖೆ ಅಧಿಕಾರಿಗಳು ಸನ್ನದ್ದವಾಗಿದ್ದು, ಪ್ರಾಣಿಬಲಿ ನೀಡುವುದನ್ನು ತಡೆಗಟ್ಟಬೇಕು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ತಿಳಿಸಿದರು.

ನಾಯಕನಹಟ್ಟಿ ಪಟ್ಟಣ ಮೂರು ಕಿ.ಮೀ. ವ್ಯಾಪ್ತಿಯ ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಬೇಕು. ಪೊಲೀಸ್ ಚೆಕ್ ಪೋಸ್ಟ್‍ಗಳಲಿ ಇವುಗಳ ಕುರಿತು ಜಾಗೃತಿ ವಹಿಸಬೇಕು ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಚಳ್ಳಕೆರೆ ತಹಶೀಲ್ದಾರ್ ರೆಹಮಾನ್ ಪಾಷಾ, ನಾಯಕನಹಟ್ಟಿ ಪಟ್ಟಣ ಪಂಚಾಯತಿ ಅಧಿಕಾರಿ ಲೀಲಾವತಿ, ನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಗಂಗಾಧರಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!