Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಟ್​ ಅಂಡ್ ರನ್ ಕಾಯ್ದೆ: ಚಿತ್ರದುರ್ಗದಲ್ಲಿ ಮೂರನೇ ದಿನಕ್ಕೆ ಮುಂದುವರೆದ ಲಾರಿ ಮಾಲೀಕರ ಮುಷ್ಕರ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.19 : ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಹಿಟ್ ಅಂಡ್ ರನ್ ಪ್ರಕರಣಗಳ ಸೆಕ್ಷನ್ 106/1, 106/2 ನ್ನು ರದ್ದುಪಡಿಸುವಂತೆ ಚಿತ್ರದುರ್ಗ ಗೂಡ್ ಷೆಡ್ ಮಾರ್ಕೆಟ್ ಲಾರಿ ಮಾಲೀಕರ ಸಂಘದಿಂದ ಎ.ಪಿ.ಎಂ.ಸಿ.ಯಲ್ಲಿ ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸಲಾಗುತ್ತಿದೆ.

ಹಿಟ್ ಅಂಡ್ ರನ್ ಸೆಕ್ಷನ್ 106/1, 106/2 ರನ್ವಯ ಚಾಲಕರಿಗೆ 5 ರಿಂದ 10 ವರ್ಷ ಜೈಲು ವಾಸ ಮತ್ತು ಏಳು ಲಕ್ಷ ರೂ. ದಂಡ ವಿಧಿಸಲಾಗುವುದು. ಹಾಗಾಗಿ ಹೊಸದಾಗಿ ಜಾರಿಗೆ ತಂದಿರುವ ಸೆಕ್ಷನ್‍ನ್ನು ಕೇಂದ್ರ ಸರ್ಕಾರ ರದ್ದುಪಡಿಸಬೇಕೆಂದು ಒತ್ತಾಯಿಸಿ ಚಿತ್ರದುರ್ಗ ಗೂಡ್ ಷೆಡ್ ಮಾರ್ಕೆಟ್ ಮತ್ತು ಲಾರಿ ಮಾಲೀಕರು ಮುಷ್ಕರ ಕುಳಿತಿದ್ದಾರೆ.

ಕರ್ನಾಟಕ ರಾಜ್ಯ ಫೆಡರೇಷನ್ ಆಫ್ ಲಾರಿ ಮಾಲೀಕರ ಸಂಘ ಕರೆ ಕೊಟ್ಟಿರುವ ಮುಷ್ಕರದಲ್ಲಿ ಚಿತ್ರದುರ್ಗ ಲಾರಿ ಮಾಲೀಕರ ಸಂಘ, ಜಿಲ್ಲಾ ಸರಕು ಮತ್ತು ಅದಿರು ಲಾರಿ ಚಾಲಕರ ಸಂಘ, ಚಿತ್ರದುರ್ಗ ಕೋಟೆ ನಾಡು ಅಪ್ಪು ಟ್ಯಾಕ್ಸಿ ಚಾಲಕರ ಮತ್ತು ಮಾಲೀಕರ ಸಂಘ, ಜಿಲ್ಲಾ ಮಿನಿ ಲಾರಿ ಮಾಲೀಕರು ಮತ್ತು ಚಾಲಕರ ಸಂಘ ಹಾಗೂ ಹಿರಿಯೂರು ಲಾರಿ ಮಾಲೀಕರು ಮತ್ತು ಟ್ರಾನ್ಸ್‍ಪೋರ್ಟ್ ಏಜೆಂಟರ ಸಂಘದವರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.

ಚಿತ್ರದುರ್ಗ ಗೂಡ್ ಷೆಡ್ ಮತ್ತು ಮಾರ್ಕೆಟ್ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಮಹಮದ್ ಆಲಿ, ಉಪಾಧ್ಯಕ್ಷ ಭೀಮರಾಜ್, ಕಾರ್ಯದರ್ಶಿ ಏಜಾಜ್‍ಸಿಂಗ್, ನಿರ್ದೇಶಕ ಸುಹೇಲ್ ಅಹಮದ್, ವಿಶ್ವನಾಥ್, ಸಲೀಂಖಾನ್, ಸಾಧಿಕ್, ಶಫಿ, ವೆಂಕಟೇಶಪ್ಪ, ಕೇಶವ, ಮುಜ್ಜು ಇನ್ನು ಅನೇಕರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment