Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಟ್​ ಅಂಡ್ ರನ್ ಕಾಯ್ದೆ: ಚಿತ್ರದುರ್ಗದಲ್ಲಿ ಮೂರನೇ ದಿನಕ್ಕೆ ಮುಂದುವರೆದ ಲಾರಿ ಮಾಲೀಕರ ಮುಷ್ಕರ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.19 : ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಹಿಟ್ ಅಂಡ್ ರನ್ ಪ್ರಕರಣಗಳ ಸೆಕ್ಷನ್ 106/1, 106/2 ನ್ನು ರದ್ದುಪಡಿಸುವಂತೆ ಚಿತ್ರದುರ್ಗ ಗೂಡ್ ಷೆಡ್ ಮಾರ್ಕೆಟ್ ಲಾರಿ ಮಾಲೀಕರ ಸಂಘದಿಂದ ಎ.ಪಿ.ಎಂ.ಸಿ.ಯಲ್ಲಿ ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸಲಾಗುತ್ತಿದೆ.

ಹಿಟ್ ಅಂಡ್ ರನ್ ಸೆಕ್ಷನ್ 106/1, 106/2 ರನ್ವಯ ಚಾಲಕರಿಗೆ 5 ರಿಂದ 10 ವರ್ಷ ಜೈಲು ವಾಸ ಮತ್ತು ಏಳು ಲಕ್ಷ ರೂ. ದಂಡ ವಿಧಿಸಲಾಗುವುದು. ಹಾಗಾಗಿ ಹೊಸದಾಗಿ ಜಾರಿಗೆ ತಂದಿರುವ ಸೆಕ್ಷನ್‍ನ್ನು ಕೇಂದ್ರ ಸರ್ಕಾರ ರದ್ದುಪಡಿಸಬೇಕೆಂದು ಒತ್ತಾಯಿಸಿ ಚಿತ್ರದುರ್ಗ ಗೂಡ್ ಷೆಡ್ ಮಾರ್ಕೆಟ್ ಮತ್ತು ಲಾರಿ ಮಾಲೀಕರು ಮುಷ್ಕರ ಕುಳಿತಿದ್ದಾರೆ.

ಕರ್ನಾಟಕ ರಾಜ್ಯ ಫೆಡರೇಷನ್ ಆಫ್ ಲಾರಿ ಮಾಲೀಕರ ಸಂಘ ಕರೆ ಕೊಟ್ಟಿರುವ ಮುಷ್ಕರದಲ್ಲಿ ಚಿತ್ರದುರ್ಗ ಲಾರಿ ಮಾಲೀಕರ ಸಂಘ, ಜಿಲ್ಲಾ ಸರಕು ಮತ್ತು ಅದಿರು ಲಾರಿ ಚಾಲಕರ ಸಂಘ, ಚಿತ್ರದುರ್ಗ ಕೋಟೆ ನಾಡು ಅಪ್ಪು ಟ್ಯಾಕ್ಸಿ ಚಾಲಕರ ಮತ್ತು ಮಾಲೀಕರ ಸಂಘ, ಜಿಲ್ಲಾ ಮಿನಿ ಲಾರಿ ಮಾಲೀಕರು ಮತ್ತು ಚಾಲಕರ ಸಂಘ ಹಾಗೂ ಹಿರಿಯೂರು ಲಾರಿ ಮಾಲೀಕರು ಮತ್ತು ಟ್ರಾನ್ಸ್‍ಪೋರ್ಟ್ ಏಜೆಂಟರ ಸಂಘದವರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.

ಚಿತ್ರದುರ್ಗ ಗೂಡ್ ಷೆಡ್ ಮತ್ತು ಮಾರ್ಕೆಟ್ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಮಹಮದ್ ಆಲಿ, ಉಪಾಧ್ಯಕ್ಷ ಭೀಮರಾಜ್, ಕಾರ್ಯದರ್ಶಿ ಏಜಾಜ್‍ಸಿಂಗ್, ನಿರ್ದೇಶಕ ಸುಹೇಲ್ ಅಹಮದ್, ವಿಶ್ವನಾಥ್, ಸಲೀಂಖಾನ್, ಸಾಧಿಕ್, ಶಫಿ, ವೆಂಕಟೇಶಪ್ಪ, ಕೇಶವ, ಮುಜ್ಜು ಇನ್ನು ಅನೇಕರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಿದ ಎಸ್ ಆರ್ ಎಸ್ ಹೆರಿಟೇಜ್ ಶಾಲೆ

  ಸುದ್ದಿಒನ್, ಚಿತ್ರದುರ್ಗ, ಮೇ. 20 : ಎಸ್ ಆರ್ ಎಸ್ ಹೆರಿಟೇಜ್ ಶಾಲೆಯು 2024-25 ರ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು ಬೇಸಿಗೆ ರಜಾ ಮುಗಿಸಿಕೊಂಡು ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

error: Content is protected !!