ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 06 : ತಾಲ್ಲೂಕಿನ ನೆಲ್ಲಿಕಟ್ಟೆ ಗ್ರಾಮದ ಕೃಷಿ ಹೊಂಡದಲ್ಲಿ ಗುರುವಾರ ಸಹೋದರರಿಬ್ಬರು ಮೃತಪಟ್ಟಿದ್ದಾರೆ. ನೆಲ್ಲಿಕಟ್ಟೆ ಗ್ರಾಮದ ನಾಗರಾಜ (35), ಶ್ರೀನಿವಾಸ್ (40) ಈಜಾಡಲು ಕೃಷಿ ಹೊಂಡಕ್ಕೆ ಇಳಿದಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ನೆಲ್ಲಿಕಟ್ಟೆ ಗ್ರಾಮದ ಅಜ್ಜಪ್ಪ ಎಂಬುವರ ಜಮೀನಿನ ಕೃಷಿ ಹೊಂಡವಾಗಿದ್ದು, ಈ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


