Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಳಲ್ಕೆರೆ, ಚನ್ನಗಿರಿ ಮಾರುಕಟ್ಟೆಯಲ್ಲಿ ದಿಢೀರನೆ ಅಡಿಕೆ ಬೆಲೆ ಕುಸಿತ..!

Facebook
Twitter
Telegram
WhatsApp

ಚಿತ್ರದುರ್ಗ: ಕಳೆದ ಕೆಲವು ತಿಂಗಳಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಎದ್ದು ಕಾಣುತ್ತಿತ್ತು. ಯಾಕಂದ್ರೆ ನಿರೀಕ್ಷೆಯಂತೆ ಅಡಿಕೆ ಧಾರಣೆ50 ಸಾವಿರಕ್ಕೆ ಏರಿಕೆಯಾಗಿತ್ತು. ಆದರೆ ಈಗ ಮಳೆಗಾಲ ಶುರುವಾಗಿರುವ ಹೊತ್ತಲ್ಲೇ ಇದ್ದಕ್ಕಿದ್ದ ಹಾಗೇ ಅಡಿಕೆ ಧಾರಣೆಯಲ್ಲಿ ಬೆಲೆ ಕುಸಿತವಾಗಿದೆ. ಇದು ರೈತರ ಬೇಸರಕ್ಕೆ, ನೋವಿಗೆ ಕಾರಣವಾಗಿದೆ.

ವಿವಿಧ ಅಡಿಕೆ ಧಾರಣೆ ಮಾರುಕಟ್ಟೆಯಲ್ಲಿ ಹತ್ತು ಸಾವಿರ ಕುಸಿತ ಕಂಡಿದೆ. ಹೊಳಲ್ಕೆರೆಯಲ್ಲಿ ಕ್ವಿಂಟಾಲ್‌ ರಾಶಿ ಅಡಿಕೆ ಧಾರಣೆ ಕನಿಷ್ಠ ₹50,519 ಇದ್ದರೆ ಗರಿಷ್ಠ 52,819 ರೂಪಾಯಿ ಆಗಿತ್ತು. ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಕನಿಷ್ಠ 47,512 ರೂಪಾಯಿ ಇದ್ದರೆ ಗರಿಷ್ಠ 53,700 ರೂಪಾಯಿ ಆಗಿತ್ತು. ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಕನಿಷ್ಠ 28,989 ರೂಪಾಯಿ ಇದ್ದರೆ ಗರುಷ್ಠ 52,219 ರೂಪಾಯಿಗೆ ಮಾರಾಟವಾಗಿದೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ 30,008-53,009 ರೂಪಾಯಿ ದರಕ್ಕೆ ಮಾರಾಟವಾಗಿದೆ. ಸರಕು ಅಡಿಕೆ ಧಾರಣೆ ಕನಿಷ್ಠ 54,069 ಇದ್ದರೆ ಗರಿಷ್ಠ 79,896 ಆಗಿತ್ತು.

ಶಿವಮೊಗ್ಗ, ಚಿತ್ರದುರ್ಗ ಭಾಗದಲ್ಲಿ ಅಡಿಕೆ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಾರೆ. ಆದರೆ ಬೆಲೆಯಲ್ಲಿ ದಿಢೀರನೇ ಕುಸಿತ ಕಂಡಿರುವುದು ರೈತರಿಗೆ ಬೇಸರ ತರಿಸಿದೆ. ಮುಂಗಾರು ಮಳೆ ಈಗ ಶುರುವಾಗಿದೆ. ಆದರೆ ಬರಗಾಲದ ಸಮಯದಲ್ಲಿ ಅಡಿಕೆ ಮರಗಳನ್ನು ಕಾಪಾಡಿಕೊಳ್ಳುವುದು ಅಷ್ಟು ಸುಲಭವಾಗಿರಲಿಲ್ಲ. ಹಾಗೋ ಹೀಗೋ ನೀರು ಬಿಟ್ಟು ಕಾಪಾಡಿಕೊಂಡಿದ್ದಾರೆ. ಇಂಥ ಕಷ್ಟದ ಪರಿಸ್ಥಿತಿಯಲ್ಲಿದ್ದಾಗ ಮಾರುಕಟ್ಟೆಯಲ್ಲೂ ಅಡಿಕೆ ಬೆಲೆ 50 ಸಾವಿರಕ್ಕೂ ಹೆಚ್ಚು ತಲುಪಿತ್ತು. ಆದರೆ ಈಗ ಇದ್ದಕ್ಕಿದ್ದ ಹಾಗೇ ಹತ್ತು ಸಾವಿರದ ತನಕ ಕುಸಿದಿರುವುದು ರೈತರಿಗೆ ಆಘಾತ ಉಂಟಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡೇವಿಡ್ ವಾರ್ನರ್ ವಿದಾಯಕ್ಕೆ ರಿಕಿ ಪಾಂಟಿಂಗ್ ಭಾವುಕ..!

ಟಿ20 ವಿಶ್ವಕಪ್ ನಲ್ಲಿ ಕಪ್ ಗೆಲ್ಲುವಲ್ಲಿ ಆಸ್ಟ್ರೇಲಿಯಾ ವಿಫಲವಾಗಿದೆ. ಈ ನೋವಿನಲ್ಲಿ ಇರುವಾಗಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದೆ. ಆಸ್ಟ್ರೇಲಿಯಾ ತಂಡದ ಸ್ಪೋಟಕ ಆಟಗಾರ, ಲೆಜೆಂಡರಿ ಕ್ರಿಕೆಟರ್ ಡೇವಿಡ್ ವಾರ್ನರ್ ಅಂತರಾಷ್ಟ್ರೀಯ ಕ್ರಿಕೆಟ್

ಕುರಿಗಾಹಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕುರಿಗಾಹಿಗಳ ಬದುಕು ಸುಲಭವಲ್ಲ. ಸಾಕಷ್ಟು ಕಷ್ಟಪಡುತ್ತಾರೆ. ಅವರಿಗೆ ಆದಂತ ಜೀವನ ಸೆಕ್ಯುರಿಟಿಗಳು ಇಲ್ಲ. ಎಲ್ಲೆಲ್ಲೋ ಕುರಿಗಳನ್ನು ಮೇಯಿಸಲು ಹೋದಾಗ ಜೀವ ರಕ್ಷಣೆಗೆ ಏನು ಇಲ್ಲ. ಕುರಿಗಾಹಿಗಳು ಬಂದೂಕು ಪರವಾನಗಿ, ಸಂಚಾರಿ ಕುರಿಗಾಹಿಗಳ ಮೇಲೆ

ಹಾಲಿನ ದರ ಏರಿಕೆಗೆ ಆಕ್ರೋಶ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು: ಸಾಮಾನ್ಯ ಜನ ಈ ಬೆಲೆ ಏರಿಕೆಯಿಂದಾನೇ ತತ್ತರಿಸಿ ಹೋಗಿದ್ದಾರೆ‌. ಮೊನ್ನೆಯಷ್ಟೇ ಪೆಟ್ರೋಲ್-ಡಿಸೇಲ್ ದರ ಏರಿಕೆಯಾಗಿದೆ. ಈಗ ಹಾಲಿನ ದರವನ್ನು ಏರಿಕೆ ಮಾಡಲಾಗಿದೆ. 2 ರೂಪಾಯಿ ಏರಿಕೆ ಮಾಡಿ 50 ML ಹಾಲನ್ನು ಜಾಸ್ತಿ

error: Content is protected !!