ಹೊಳಲ್ಕೆರೆ | ಅಮೃತಾಪುರ ಪ್ರಾಥಮಿಕ ಶಾಲೆಯಲ್ಲಿ ಕನಕದಾಸರ ಜಯಂತಿ ಆಚರಣೆ

 

ಸುದ್ದಿಒನ್, ಹೊಳಲ್ಕೆರೆ, ನವೆಂಬರ್. 18 : ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯ ಬಲ್ಲಿರಾ ಎಂದು ಜಾತಿಯ ಮದದಲ್ಲಿ ಮನುಷ್ಯರನ್ನು ಕೀಳಾಗಿ ಕಾಣುತ್ತಿದ್ದ ಸಮಾಜದ ಉನ್ನತ ವರ್ಗದವರನ್ನು ದಿಟ್ಟತನದಲ್ಲಿ ಪ್ರಶ್ನಿಸುವ ಛಲ ತೋರಿದವರು ಕನಕದಾಸರು. ಕುಲದ ಮದವ ಅಡಗಿಸಲು ಅಹರ್ನಿಶಿ ಶ್ರಮಿಸಿದ ಜಾತ್ಯಾತೀತ ವ್ಯಕ್ತಿ ಕನಕದಾಸರು ಎಂದು ಸಹಶಿಕ್ಷಕರಾದ ಟಿ.ಪಿ.ಉಮೇಶ್ ಹೇಳಿದರು.

ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಸಮೀಪದ ಅಮೃತಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂತಶ್ರೇಷ್ಟ ಕನಕದಾಸರ ಜನ್ಮೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದರು ಬಾಡದ ನಾಯಕರಾಗಿದ್ದರು ಹಮ್ಮು ಹಗೆಗಳ ತೋರದವರು ದರ್ಪ ದೌರ್ಜನ್ಯ ಎಸಗದ ಅನನ್ಯ ವ್ಯಕ್ತಿತ್ವ ಕನಕದಾಸರದಾಗಿತ್ತು. ಪ್ರಜೆಗಳ ಕಲ್ಯಾಣಕ್ಕೆ ಶ್ರೇಯೋಭಿವೃದ್ಧಿಗೆ ಧನಕನಕಗಳ ಧಾರೆಯೆರೆದು ತಿಮ್ಮಪ್ಪನಾಯಕ ಕನಕನಾಯಕರಾದರು. ಮುಂದೆ ವೈರಾಗ್ಯ ತಪೋನಿಧಿಯಾಗಿ ಕನ್ನಡ ನಾಡಿನ ಕನಕದಾಸರಾದರು. ಜನರನ್ನು ನೀತಿ ಮಾರ್ಗದಿ ನಡೆಸಲು ಕೀರ್ತನೆಗಳ ರಚಿಸಿ ಹಾಡಿದರು. ಹರಿಭಕ್ತಿಸಾರ, ಮೋಹನ ತರಂಗಿಣಿ, ರಾಮಧಾನ್ಯ ಚರಿತೆ, ನಳಚರಿತ್ರೆ ಕಾವ್ಯಕೃತಿಗಳ ರಚಿಸಿ ಶ್ರೇಷ್ಟ ಕನ್ನಡ ಕೃತಿಕಾರರಾಗಿ ನಾಡಿನ ಜನಮಾನಸದಲ್ಲಿ ಅಜರಾಮರರಾಗಿದ್ದಾರೆ. ಇಂದಿನ ಮಕ್ಕಳು ಕನಕರ ಸರಳತೆ, ಜಾತ್ಯಾತೀತ ಭಾವನೆ, ಅಧ್ಯಯನಶೀಲತೆ, ಬರವಣಿಗೆ ಕಲೆ ರೂಢಿಸಿಕೊಂಡು ನಾಡಿಗೆ ಕೀರ್ತಿ ತರುವಂತವರಾಗಬೇಕು ಎಂದು ತಿಳಿಸಿದರು.

ಕನಕದಾಸರ ಕೀರ್ತನೆಗಳನ್ನು ಶಾಲಾ ವಿದ್ಯಾರ್ಥಿಗಳಾದ ಆರ್.ದೀಕ್ಷಾ, ಲಕ್ಷ್ಮಿದೇವಿ ಹಾಡಿದರು, ಕನಕರ ಭಾವಚಿತ್ರಗಳನ್ನು ವಿದ್ಯಾರ್ಥಿಗಳಾದ ಮಾರುತಿ, ತರುಣ, ಕೆ.ಉಷ, ಡಿ.ದೀಕ್ಷಾ ರಚಿಸಿದರು. ಕನಕರ ವ್ಯಕ್ತಿತ್ವ ಕುರಿತು ತನುಶ್ರೀ, ದೀಪ, ಮಾನಸ, ಅನಿತ, ಲಿಂಗರಾಜ ಮಾತನಾಡಿದರು. ಮುಖ್ಯೋಪಾಧ್ಯಾಯರಾದ ಡಿ.ಸಿದ್ಧಪ್ಪ, ಸಹಶಿಕ್ಷಕರಾದ ಟಿ.ಪಿ.ಉಮೇಶ್, ಜಿ.ಎನ್.ರೇಷ್ಮಾ, ಅಕ್ಷರ ದಾಸೋಹ ಕಾರ್ಯಕರ್ತರಾದ ತಿಮ್ಮಕ್ಕ, ಶಾರದಮ್ಮ ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

16 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

41 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

2 hours ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

2 hours ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago