Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Facebook
Twitter
Telegram
WhatsApp

ಸುದ್ದಿಒನ್, ಹೊಳಲ್ಕೆರೆ, ಸೆಪ್ಟೆಂಬರ್. 02 : ತಾಲ್ಲೂಕಿನ ಅರೇಹಳ್ಳಿಯ ಸ್ನೇಹ ಪಬ್ಲಿಕ್ ಶಾಲೆ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಇಲ್ಲಿನ

ಸ್ನೇಹ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಸಂಸ್ಥೆಯ ಹೊಳಲ್ಕೆರೆ ಸುಮಿತ್ರಕ್ಕ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡಿ
ಮಹಾವಿಷ್ಣುವಿನ ಎಂಟನೇ ಅವತಾರವಾದ ಶ್ರೀ ಕೃಷ್ಣ ಕೃಷ್ಣನ ಜನಿಸಿ ಮಹಾಭಾರತ ಯುದ್ಧವನ್ನು ನಡೆಸಿ ಎತ್ತಿ ಹಿಡಿದಿದ್ದು ಒಂದು ಅಭೂತಪೂರ್ವ ಕಾರ್ಯ ಈ ಒಂದು ಮಹಾಭಾರತ ಯುದ್ಧದಲ್ಲಿ ಭಗವದ್ಗೀತೆಯನ್ನು ಬೋಧಿಸಿ ಮಾನವರ ಕಲ್ಯಾಣಕ್ಕಾಗಿ ಶ್ರಮಿಸಿದ ಅದ್ಭುತ ಪೂರ್ವ ವ್ಯಕ್ತಿಯಾಗಿ ಅವತರಿಸಿದ ಶ್ರೀ ಕೃಷ್ಣ ಪರಮಾತ್ಮ ಎಂದು ಭೋದಿಸಿದರು.

ಶಾಲೆಯ ಪ್ರಾಂಶುಪಾಲರಾದ ಜಿ. ಸಿ. ವೇಣುಗೋಪಾಲ್ ರವರು ಮಾತನಾಡಿ
ಪೋಷಕರು ಮಕ್ಕಳಿಗೆ ಮನೆಯಲ್ಲಿ ಕೃಷ್ಣನ ಬಗ್ಗೆ ಮಹಾಭಾರತ ಪುರಾಣ ಕಥೆಗಳನ್ನು ಹೇಳಬೇಕು ಎಂದು ತಿಳಿಸಿದರು.

ಶ್ರೀಮತಿ ಛಾಯಾ ಮಂಜುನಾಥ್ ಮಾತನಾಡಿ
ಶ್ರೀ ಕೃಷ್ಣ ಪರಮಾತ್ಮ ಅವತರಿಸಿದ ಉದ್ದೇಶವೇ ಹಿಂದೂ ಧರ್ಮ ರಕ್ಷಣೆಗಾಗಿ. ತನ್ನ ಬಾಲ್ಯದಿಂದಲೂ ಅವತಾರದ ಅಂತ್ಯದವರೆಗೂ ಧರ್ಮರಕ್ಷಣೆಗಾಗಿ ಎತ್ತಿ ಹಿಡಿದರು ಎಂದು ತಿಳಿಸಿದರು.

ಮಕ್ಕಳು ಶ್ರೀ ಕೃಷ್ಣನ ವೇಷ ಧರಿಸಿ ಸಂಭ್ರಮದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಜೆ. ಎಸ್. ವಸಂತ್, ನಿರ್ದೇಶಕರಾದಂತ ಬಿ. ಎಸ್. ಹರೀಶ್ ಬಾಬು ಎಂ, ಜೆ ನಾಗರಾಜ್ ಹಾಗೂ ಪೋಷಕರು ವಿದ್ಯಾರ್ಥಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!