ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವು ಭೀಕರ ರಸ್ತೆ ಅಪಘಾತಗಳು ವರದಿಯಾಗುತ್ತಿವೆ.ಹೊಳಲ್ಕೆರೆ ಸಮೀಪದ ರಾಮಗಿರಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ.
ಖಾಸಗಿ ಬಸ್ ಎತ್ತಿನ ಗಾಡಿಗೆ ಹಿಂಬದಿಯಿಂದ ಡಿಕ್ಕಿಹೊಡೆದಿದ್ದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ, ಐದಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆದೇವರ ಹೊಳೆ ಪೂಜೆ ಮುಗಿಸಿ ವಾಪಸು ತೆರಳುವಾಗ ಈ ಅಪಘಾತ ಸಂಭವಿಸಿದೆ.ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಗುಂಡಿಮಡು ಗೊಲ್ಲರಹಟ್ಟಿಯ ನಿವಾಸಿಯಾಗಿದ್ದು,
ಚಂದ್ರ, ಕಾಟಪ್ಪ ನಾಗೇಂದ್ರ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿವೆ. ಗಂಭೀರ ಗಾಯಳುಗನ್ನು ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಹೊಳಲ್ಕೆರೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



