ಹೊಳಲ್ಕೆರೆ : ಮಾ.16 ರಿಂದ 23 ರವರೆಗೆ ತಾಳಿಕಟ್ಟೆಯಲ್ಲಿ ತೋಪು ಜಾತ್ರಾ ಮಹೋತ್ಸವ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 15 : ಹೊಳಲ್ಕೆರೆ ತಾಲ್ಲೂಕು ತಾಳಿಕಟ್ಟೆಯಲ್ಲಿ ಮಾ.16 ರಿಂದ 23 ರವರೆಗೆ ಬೀರಲಿಂಗೇಶ್ವರಸ್ವಾಮಿ(ಶ್ರೀಹಳ್ಳದ ಜಂಗಮ) ದೇವಾಲಯದ ಆವರಣದಲ್ಲಿ ತೋಪು ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆ ಹಾಗೂ ಶ್ರದ್ದಾ ಭಕ್ತಿಯಿಂದ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿ.ಗಂಗಾಧರ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 32 ವರ್ಷದ ನಂತರ ನಡೆಯುತ್ತಿರುವ ಜಾತ್ರೆಯಲ್ಲಿ ಭಾನುವಾರ ಮಧ್ಯಾಹ್ನ ಮೂರು ಗಂಟಗೆ ಮೀಸಲು ಗೂಡೆಯೊಂದಿಗೆ ತಾಳಿಕಟ್ಟೆಯ ರಾಜ ಬೀದಿಗಳಲ್ಲಿ ಹಳ್ಳದ ಜಂಗಮ ಕಲಾ ಸಂಘ ಹಾಗೂ ಬೀರಲಿಂಗೇಶ್ವರ ಮಹಿಳಾ ವೀರಗಾಸೆ ಕಲಾ ಸಂಘದಿಂದ ಡೊಳ್ಳು ಕುಣಿತದೊಂದಿಗೆ ಮೆರವಣಿಗೆ ಹೊರಡಲಿದೆ.

ತೋಪು ಜಾತ್ರಾ ಮಹೋತ್ಸವ ಅಂಗವಾಗಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪನವರು ಮೂವತ್ತು ಕೋಟಿ ರೂ.ವೆಚ್ಚದಲ್ಲಿ ರಸ್ತೆ, ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆ ಕಲ್ಪಿಸಿದ್ದಾರೆ. ಪ್ರತಿ ನಿತ್ಯವೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿದಿನ 25 ರಿಂದ 50 ಸಾವಿರ ಭಕ್ತರು ಸೇರಲಿದ್ದು, ಅಣ್ಣ-ತಮ್ಮಂದಿರೆಲ್ಲಾ ಒಂದಾಗಿ ಸೇರಿ ಆಚರಿಸುವುದು ಈ ಜಾತ್ರೆಯ ಮಹತ್ವ ಎಂದು ಹೇಳಿದರು.

ಕನಕ ಗುರುಪೀಠದ ಈಶ್ವರಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಂಜೆ ಐದು ಗಂಟೆಗೆ ಧ್ವಜಾರೋಹಣ.
ರೇವಣ್ಣಯ್ಯ ಒಡೆಯರ್, ಗುರಯ್ಯ ಒಡೆಯರ್, ಓಂಕಾರಯ್ಯ ಒಡೆಯರ್, ಜಯಪ್ಪ ದಳವಾಯಪ್ಪ ಸ್ವಾಮಿಗಳು ಸಾನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಜಾತ್ರಾ ಮಹೋತ್ಸವ ಉದ್ಗಾಟಿಸುವರು.

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ತಾಳಿಕಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಬಸವರಾಜಪ್ಪ, ಟಿ.ಕೆ.ಚಂದ್ರಮೌಳಿ ಗುಡಿಗೌಡರು, ಮಾಜಿ ಗುಡಿಗೌಡ ಡಿ.ಕೆ.ಕೆಂಚಪ್ಪ ಮುಖ್ಯ ಅತಿಥಿಗಳಾಗಿ ತರಿಕೆರೆ ಶಾಸಕ ಶ್ರೀನಿವಾಸ್, ಕಡೂರು ಶಾಸಕ ಆನಂದ, ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ, ಮಾಜಿ ಶಾಸಕ ಎ.ವಿ.ಉಮಾಪತಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲ ಸುರೇಶ್‍ಬಾಬು, ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ನೇತ್ರಾವತಿ ಗಂಗಾಧರ್ ಇನ್ನು ಅನೇಕರು ಪಾಲ್ಗೊಳ್ಳುವರು ಎಂದು ಹೇಳಿದರು. ರಮೇಶ್, ಮಾಲತೇಶ್ ಅರಸ್ ಪತ್ರಿಕಾಗೋಷ್ಠಿಯಲ್ಲಿದ್ದರು.

 

suddionenews

Recent Posts

ಹಿರಿಯೂರಿನಲ್ಲಿ ಕಾಂಗ್ರೆಸ್ ಮುಖಂಡರ ಬಡಿದಾಟ

ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…

9 hours ago

ಚಿತ್ರದುರ್ಗ | ಜಿ.ಪಿ.ಉಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…

9 hours ago

ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮಾಧ್ಯಮಗಳ ಸಹಕಾರ ಅಗತ್ಯ : ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್

  ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…

10 hours ago

ಚಿತ್ರದುರ್ಗಕ್ಕೆ ಆಗಮಿಸಿದ ವಿಕಲಚೇತನರ ಬೈಕ್ ರ‌್ಯಾಲಿ : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

10 hours ago

ಅಲ್ ರೆಹಮಾನ್ ಆರ್ಗನೈಜೆಷನ್ ವತಿಯಿಂದ ರಂಜಾನ್ ರೇಷನ್ ಕಿಟ್ ವಿತರಣೆ

ಸುದ್ದಿಒನ್, ಹರಿಹರ, ಮಾರ್ಚ್. 19 :  ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…

10 hours ago

ಸುನಿತಾ ವಿಲಿಯಮ್ಸ್ ಅವರ ಆತ್ಮಸ್ಥೈರ್ಯ, ತಾಳ್ಮೆ ಯುವಪೀಳಿಗೆಗೆ ಮಾದರಿ : ಡಾ.ಕೆ.ಸೌಮ್ಯಾ ಮಂಜುನಾಥ್

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…

11 hours ago