Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಮಂತ್ರಿ ಆರಗ ಪ್ರತಿ ಘಟನೆಗೂ ಕೋಮು ಬಣ್ಣ ಕೊಡ್ತಾರೆ : ಬಿ ಕೆ ಹರಿಪ್ರಸಾದ್

Facebook
Twitter
Telegram
WhatsApp

ಬಳ್ಳಾರಿ: ಗೃ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಮಾತನಾಡಿದ್ದು, ಇಲಾಖೆಯಿಂದ ಬಂದಂತ ವಿಚಾರಗಳನ್ನು ತೆಗೆದುಕೊಂಡು ಹೇಳಬೇಕೆ‌ ವಿನಃ ಬಲ್ಲ ಮೂಲಗಳಿಂದ ಬಂದಂತ ವಿಚಾರಗಳನ್ನು ಇಟ್ಟುಕೊಂಡು ಹೇಳುವುದಲ್ಲ. ಬಲ್ಲ‌ ಮೂಲಗಳು ಯಾವುದು ಅಂತ ಇವತ್ತಿಗೂ ಸಹ ಅವರು ಹೇಳುವುದಕ್ಕೆ ಆಗುತ್ತಿಲ್ಲ. ಗೃಹಮಂತ್ರಿಗಳಾದಾಗಿನಿಂದಲೂ ಸಹ ಮೈಸೂರಲ್ಲಿ ಅತ್ಯಾಚಾರ ಪ್ರಕರಣ, ಹರ್ಷ ಕೊಲೆ, ಬೆಂಗಳೂರಿನಲ್ಲಿ ನಡೆದಂತ ಚಂದ್ರು ಕೊಲೆ ಎಲ್ಲಾ ಘಟನೆಗೂ ಸಹ ಕೋಮು ಬಣ್ಣ ಕೊಡುತ್ತಿದ್ದಾರೆ. ಇದನ್ನು ನೋಡಿದಾಗ ಮರ್ಕಟ ದಳದವರು ಎಂಬಂತೆ ಕಾಣುತ್ತದೆ.

ಕಾನೂನಿನ ಚೌಕಟ್ಟಿನಲ್ಲಿ ಯಾವ ರೀತಿ ಕೆಲಸ ಮಾಡಬೇಕು, ಸಂವಿಧಾನದ ಚೌಕಟ್ಟಿನಲ್ಲಿ ಯಾವ ರೀತಿ ಕೆಲಸ ಮಾಡಬೇಕಹ ಎಂಬುದು ಗೊತ್ತಿಲ್ಲ. ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಮಾಡಿದ್ದಾರೆ. ಆದರೆ ಈಗ ಬೇಲಿಯೇ ಎದ್ದು ಹೊಲ ಮೇಯ್ದ ಹಾಗೇ ಆಗಿದೆ. ಜನ ಭಯಭೀತರಾಗಿದ್ದಾರೆ. ಎಲ್ಲಾ ವಿಚಾರದಲ್ಲೂ ಕೋಮು ದ್ವೇಷ ಹೇಳಿಕೆ ಕೊಡುವುದು ಸರಿಯಲ್ಲ. ಗೃಹಮಂತ್ರಿಗಳು ರಾಜೀನಾಮೆ ಕೊಡಬೇಕು ಎಂಬುದನ್ನು ಆಗ್ರಹಿಸಿ ಎಲ್ಲಾ ಜಿಲ್ಲೆಗಳಲ್ಲೂ ದೂರು ದಾಖಲಾಗುತ್ತಿದೆ ಎಂದಿದ್ದಾರೆ.

ಹಿಜಾಬ್ ವಿಚಾರ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಹಿಜಾಬ್ ವಿಚಾರ ಅಲ್ಲ ಅದು. ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚನೆ ಮಾಡಿಸಬೇಕೆಂಬ ಉದ್ದೇಶದಿಂದ ಮಾಡಿರುವ ಕೆಲಸವದು. ಉತ್ತರ ಭಾರತಕ್ಕೆ ಹೋದರೆ ಎಲ್ಲಾ ಹಿಂದೂಗಳು ಹಾಕಿಕೊಂಡಿರುತ್ತಾರೆ. ಹೆಣ್ಣು ಮಕ್ಕಳ ಬಗ್ಗೆ ಗೌರವ ಇದ್ದರೆ ಗಂಡ ಸತ್ತವ ವಿಧವೆಯರಿರುತ್ತಾರಲ್ಲ ಅವರಿಗೆ ತಲೆ ಬೋಳಿಸಿ ತಲೆ‌ಮೇಲೆ ಸೆರಗು ಹಾಕುತ್ತಾರೆ. ಅದರ ವಿರುದ್ಧ ಹೋರಾಟ ಮಾಡಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!