ಹರ್ಷನ ಹತ್ಯೆ ಸಂಬಂಧ ಸಂಪೂರ್ಣ ಮಾಹಿತಿ ನೀಡಲು ಆಗಲ್ಲವೆಂದ ಗೃಹ ಸಚಿವ ಆರಗ ಜ್ಞಾನೇಂದ್ರ..!

suddionenews
1 Min Read

ಬೆಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾದ ಬಳಿಕ, ತನಿಖೆ ನಡೆಯುತ್ತಿದೆ. ಈಗಾಗಲೇ 7 ಜನ ಆರೋಪಿಗಳನ್ನು ಬಂಧಿಸಿ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿ, ಸಂಪೂರ್ಣ ಮಾಹಿತಿ‌ನೀಡಲು ಆಗಲ್ಲ. ಪ್ರಕರಣ ವಿಚಾರಣೆಯ ಹಂತದಲ್ಲಿದೆ. ಹೀಗಾಗಿ ಏನನ್ನು ಹೇಳಲು ಆಗಲ್ಲ ಎಂದಿದ್ದಾರೆ.

ನಗರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನಿವಾಸದಲ್ಲಿ ಸಿಎಂ ಅವರನ್ನ ಭೇಟಿ ಮಾಡಿ ಮಾತನಾಡಿದ್ದು, ಹರ್ಷನ ಹತ್ಯೆ ವಿಚಾರವಾಗಿ ಸಂಪೂರ್ಣ ವಿವರ ಕೊಡೋದಕ್ಕೆ ಸಾಧ್ಯವಾಗುವುದಿಲ್ಲ. ಶಿವಮೊಗ್ಗದಲ್ಲಿ ಸದ್ಯ ಪರಿಸ್ಥಿತಿಯನ್ನ ಹತೋಟಿಗೆ ತರಲು ಎಲ್ಲಾ‌ ಕ್ರಮಗಳನ್ನ ಕೈಗೊಳ್ಳಲಾಗಿದೆ. ಇಲ್ಲಿವರೆಗೂ ಹರ್ಷನ ಕೊಲೆಯ ತನಿಖೆ ಏನೇನು ಆಗಿದೆ ಆ ಎಲ್ಲಾ ಮಾಹಿತಿಯನ್ನು ಸಿಎಂ ಬೊಮ್ಮಾಯಿ ಅವರಿಗೆ ತಿಳಿಸಲಾಗಿದೆ.

ಶಿವಮೊಗ್ಗದ ಪರಿಸ್ಥಿತಿಯ ಬಗ್ಗೆಯೂ ಸಿಎಂ ಬಳಿ ಮಾತನಾಡಿದ್ದೇನೆ. ಬಜೆಟ್ ನಲ್ಲಿ ಪೊಲೀಸ್ ಇಲಾಖೆಗೆ ಹಣ ಮೀಸಲಿಡುವ ಬಗ್ಗೆಯೂ ಚರ್ಚಿಸಿದ್ದೇನೆ. ಇವತ್ತು ರಮಣ ಗುಪ್ತ ಅವರು ಶಿವಮೊಗ್ಗಕ್ಕೆ ತೆರಳುತ್ತಿದ್ದಾರೆ. ಲಾ ಆಂಡ್ ಆರ್ಡರ್ ಮೆಂಟೈನ್ ಮಾಡಲು ಅವರನ್ನ ಶಿವಮೊಗ್ಗಕ್ಕೆ ಕಳುಹಿಸಲಾಗುತ್ತಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *