ಬೆಂಗಳೂರು: ತುಮಕೂರಿನಲ್ಲಿ ಮೇ 19 ರಂದು ಹಮ್ಮಿಕೊಳ್ಳಲಾಗಿರುವ “ಪ್ರಗತಿಯತ್ತ ಕರ್ನಾಟಕ” ಮೂರು ವರ್ಷಗಳ ಸಾಧನೆ ಹಾಗೂ ಸೇವೆಯ ಸಮರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.
ಗೃಹ ಸಚಿವರಾದ ಜಿ. ಪರಮೇಶ್ವರ್ ಅವರು ಇಂದು ಮುಖ್ಯಮಂತ್ರಿಗಳನ್ನು ಖುದ್ದಾಗಿ ಭೇಟಿಯಾಗಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಿದರು. ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಶಾಸಕರುಗಳಾದ ಜೆ.ಟಿ. ಪಾಟೀಲ್ ಹಾಗೂ ಎ.ಆರ್. ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು. ಸಮಾವೇಶದ ಸಿದ್ಧತೆಗಳ ಕುರಿತು ಇದೇ ವೇಳೆ ಸಿಎಂ ಅವರೊಂದಿಗೆ ಚರ್ಚಿಸಲಾಯಿತು ಎನ್ನಲಾಗಿದೆ.
ತುಮಕೂರಿನಲ್ಲಿ ಮೇ 19 ರಂದು ನಡೆಯಲಿರುವ "ಪ್ರಗತಿಯತ್ತ ಕರ್ನಾಟಕ" ಮೂರು ವರ್ಷದ ಸಾಧನೆ – ಸೇವೆಯ ಸಮರ್ಪಣೆ ಕಾರ್ಯಕ್ರಮಕ್ಕೆ ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಇಂದು ನನ್ನನ್ನು ಭೇಟಿಯಾಗಿ, ಆಹ್ವಾನ ನೀಡಿದರು.
ಶಾಸಕರಾದ ಜೆ.ಟಿ.ಪಾಟೀಲ್, ಎ.ಅರ್.ಕೃಷ್ಣಮೂರ್ತಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/YA3U1o4CPD
— Siddaramaiah (@siddaramaiah) May 16, 2026















