Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಪೇಂದ್ರ ಅವರ ಗಾದೆ ಮಾತಿಗೆ ಗೃಹ ಸಚಿವ ಪರಮೇಶ್ವರ್ ಗರಂ..!

Facebook
Twitter
Telegram
WhatsApp

 

ತುಮಕೂರು: ಫೇಸ್ ಬುಕ್ ಲೈವ್ ಬಂದಾಗ ನಟ ಉಪೇಂದ್ರ ಅವರು ಗಾದೆ ಮಾತೊಂದನ್ನು ಹೇಳುವ ಮೂಲಕ ಒಂದು ಸಮುದಾಯಕ್ಕೆ ಅವಹೇಳನವಾಗುವಂತೆ ಮಾತನಾಡಿದ್ದರು. ಬಳಿಕ ಇದರ ವಿರುದ್ಧ ಹಲವು ಸಂಘಟನೆಗಳು ರೊಚ್ಚಿಗೆದ್ದು ಪ್ರತಿಭಟನೆ ಕೂಡ ನಡೆಸಿದ್ದರು. ಹೈಕೋರ್ಟ್ ನಿಂದ ಉಪೇಂದ್ರ ಅವರಿಗೆ ರಿಲೀಫ್ ಸಿಕ್ಕ ಮೇಲೆ, ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದರು. ಈ ವಿಚಾರವಾಗಿ‌ ಇಂದು ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿ,‌ ಆಕ್ರೋಶ ಹೊರ ಹಾಕಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಯಾರು ಕೂಡ ಒಂದು ಸಮುದಾಯದ ಬಗ್ಗೆ ಮಾತನಾಡಬಾರದು. ಗಾದೆ ಮಾತು ಇದೆ ಅಂತ ಯಾರೂ ಮಾತನಾಡಬಾರದು. ಸಚಿವರೇ ಆಗಲಿ, ಯಾರೇ ಆಗಲಿ ಈ ರೀತಿ ಮಾತನಾಡುವುದು ಸರಿ ಅಲ್ಲ. ಒಂದು ಸಮುದಾಯದ ಬಗ್ಗೆ ಇಷ್ಟು ಕೀಳಾಗಿ ಮಾತಾಡುವ ಸಂಸ್ಕೃತಿ‌ ನಿಲ್ಲಿಸಬೇಕು.

ಈಗಿನ ಆಧುನಿಕ ಜಗತ್ತಿನಲ್ಲಿ ಆ ನಾಣ್ನೂಡಿ ಸರಿಯಾಗಿಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಯಾಕೆ ಆ ರೀತಿ ಮಾತನಾಡಬೇಕು. ಆ ಸಮುದಾಯದವರ ನೋವಾಗುವ ರೀತಿ ಮಾತನಾಡಬಾರದು. ಸಿಎಂ ಜೊತೆಗೆ ಮಾತನಾಡ್ತೀನಿ. ಉಪೇಂದ್ರ, ಎಸ್ ಎಸ್ ಮಲ್ಲಿಕಾರ್ಜುನ ಅವರ ಬಗ್ಗೆ ಚರ್ಚೆ ಮಾಡ್ತೇನೆ. ಇಬ್ಬರ ಹೇಳಿಕೆ ಬಗ್ಗೆ ಸಿಎಂ ಬಳಿ ಚರ್ಚೆ ನಡೆಸುತ್ತೇನೆ. ಇದೊಂದು ನಾನ್ಸೆನ್ಸ್ ಹೇಳಿಕೆ. ಸಾಮಾಜಿಕ ಜೀವನದಲ್ಲಿ ಇದ್ದು ಇಷ್ಟು ಕೀಳಾಗಿ ಮಾತನಾಡಬಾರದು. ಎರಡು ಪ್ರಕರಣದಲ್ಲೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!