Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತುಮಕೂರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಲು ಸರ್ಕಾರಕ್ಕೆ ಗೃಹ ಸಚಿವರ ಮನವಿ..!

ಸಚಿವ ಪರಮೇಶ್ವರ್
---Advertisement---

ತುಮಕೂರು: ಈ ವರ್ಷ ಮಳೆ ಬರೋದು ಡೌಟಾಗಿದೆ, ಬೆಳೆ ಬೆಳೆಯೋದು ಡೌಟಾಗಿದೆ. ರೈತರ ಕಣ್ಣೀರ ಕಥೆ ಕೇಳೋರಿಲ್ಲದಂತಾಗಿದೆ. ಬೆಳಗ್ಗೆಯಿಂದ ಸಂಜೆ ತನಕ ಮೋಡ ನೋಡುವುದೇ ರೈತನ ಕೆಲಸವಾಗಿದೆ. ನಿನ್ನೆ ಕೊಂಚ ಮಟ್ಟಿಗೆ ತುಮಕೂರು ಜಿಲ್ಲೆಯಲ್ಲಿ ಮೋಡದಲ್ಲಿ ಮಳೆಯ ವಾತಾವರಣ ನಿರ್ಮಾಣವಾಗಿತ್ತು. ಆದರೆ ನೋಡ ನೋಡುತ್ತಲೇ ಮೋಡ ಸರಿದಿದೆ.

ಇದೀಗ ಜಿಲ್ಲೆಯಲ್ಲಿ ಮಳೆಯಿಲ್ಲದ ಕಾರಣ, ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ತುಮಕೂರು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಮನವಿ ಮಾಡಿದ್ದಾರೆ. ಹತ್ತು ತಾಲೂಕುಗಳು ಬರಪೀಡಿತ ಪ್ರದೇಶವಾಗಿದೆ. ವಾಡಿಕೆಯಂತೆ ಮಳೆ ಸುರಿಯದ ಕಾರಣ ಬೆಳೆ ನೆಲಕಚ್ಚಿದೆ. ಹೀಗಾಗಿ ತುಮಕೂರು ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಪತ್ರದ ಮೂಲಕ ಘೋಷಣೆ ಮಾಡಲು ಮನವಿ ಮಾಡಿದ್ದಾರೆ.

ತುಮಕೂರು ಮಾತ್ರವಲ್ಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಮಳೆ ಬೆಳೆ ಬೆಳೆಯುವ ಪ್ರದೇಶಗಳೆ ಹೆಚ್ಚಾಗಿರುವ ಕಾರಣ, ಮುಂದೇನು ಅಂತ ರೈತರಿಗೆ ಗೊತ್ತಾಗುತ್ತಿಲ್ಲ. ಈ ವರ್ಷ ಬೆಳೆ ಬೆಳೆಯದೆ ಹೋದಲ್ಲಿ ಒಂದು ವರ್ಷದ ದುಡಿಮೆ ಇಲ್ಲದಂತೆ ಆಗುತ್ತದೆ. ಹೀಗಾಗಿ ರೈತರು ಕಣ್ಣೀರಲ್ಲಿ ಮುಳುಗಿದ್ದಾರೆ. ಸರ್ಕಾರ ಮಾತ್ರ ಗ್ಯಾರಂಟಿಗಳ ಕಡೆಗೆ ಹೆಚ್ಚು ಗಮನ ಕೊಟ್ಟಿದೆಯೇ ವಿನಃ ರೈತರ ಸಮಸ್ಯೆಗಳು, ಮಳೆ ಕಡೆ ಗಮನವೇ ನೀಡುತ್ತಿಲ್ಲ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment