Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಲು ಸರ್ಕಾರಕ್ಕೆ ಗೃಹ ಸಚಿವರ ಮನವಿ..!

Facebook
Twitter
Telegram
WhatsApp

ತುಮಕೂರು: ಈ ವರ್ಷ ಮಳೆ ಬರೋದು ಡೌಟಾಗಿದೆ, ಬೆಳೆ ಬೆಳೆಯೋದು ಡೌಟಾಗಿದೆ. ರೈತರ ಕಣ್ಣೀರ ಕಥೆ ಕೇಳೋರಿಲ್ಲದಂತಾಗಿದೆ. ಬೆಳಗ್ಗೆಯಿಂದ ಸಂಜೆ ತನಕ ಮೋಡ ನೋಡುವುದೇ ರೈತನ ಕೆಲಸವಾಗಿದೆ. ನಿನ್ನೆ ಕೊಂಚ ಮಟ್ಟಿಗೆ ತುಮಕೂರು ಜಿಲ್ಲೆಯಲ್ಲಿ ಮೋಡದಲ್ಲಿ ಮಳೆಯ ವಾತಾವರಣ ನಿರ್ಮಾಣವಾಗಿತ್ತು. ಆದರೆ ನೋಡ ನೋಡುತ್ತಲೇ ಮೋಡ ಸರಿದಿದೆ.

ಇದೀಗ ಜಿಲ್ಲೆಯಲ್ಲಿ ಮಳೆಯಿಲ್ಲದ ಕಾರಣ, ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ತುಮಕೂರು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಮನವಿ ಮಾಡಿದ್ದಾರೆ. ಹತ್ತು ತಾಲೂಕುಗಳು ಬರಪೀಡಿತ ಪ್ರದೇಶವಾಗಿದೆ. ವಾಡಿಕೆಯಂತೆ ಮಳೆ ಸುರಿಯದ ಕಾರಣ ಬೆಳೆ ನೆಲಕಚ್ಚಿದೆ. ಹೀಗಾಗಿ ತುಮಕೂರು ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಪತ್ರದ ಮೂಲಕ ಘೋಷಣೆ ಮಾಡಲು ಮನವಿ ಮಾಡಿದ್ದಾರೆ.

ತುಮಕೂರು ಮಾತ್ರವಲ್ಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಮಳೆ ಬೆಳೆ ಬೆಳೆಯುವ ಪ್ರದೇಶಗಳೆ ಹೆಚ್ಚಾಗಿರುವ ಕಾರಣ, ಮುಂದೇನು ಅಂತ ರೈತರಿಗೆ ಗೊತ್ತಾಗುತ್ತಿಲ್ಲ. ಈ ವರ್ಷ ಬೆಳೆ ಬೆಳೆಯದೆ ಹೋದಲ್ಲಿ ಒಂದು ವರ್ಷದ ದುಡಿಮೆ ಇಲ್ಲದಂತೆ ಆಗುತ್ತದೆ. ಹೀಗಾಗಿ ರೈತರು ಕಣ್ಣೀರಲ್ಲಿ ಮುಳುಗಿದ್ದಾರೆ. ಸರ್ಕಾರ ಮಾತ್ರ ಗ್ಯಾರಂಟಿಗಳ ಕಡೆಗೆ ಹೆಚ್ಚು ಗಮನ ಕೊಟ್ಟಿದೆಯೇ ವಿನಃ ರೈತರ ಸಮಸ್ಯೆಗಳು, ಮಳೆ ಕಡೆ ಗಮನವೇ ನೀಡುತ್ತಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ : ಕೇಳಿದ್ದು ಎಷ್ಟು ಕೋಟಿ, ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಹಣ ಬಿಡುಗಡೆ

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

error: Content is protected !!