ಹೊನ್ನಾಳಿ ಪಟ್ಟಣದ ರಸ್ತೆ ವಿಚಾರ : ಸರ್ಕಾರದ ವಿರುದ್ಧ ರೇಣುಕಾಚಾರ್ಯ ಆಕ್ರೋಶ

1 Min Read

ದಾವಣಗೆರೆ: ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಗೆ ಸಂಬಂಧಿಸಿದಂತೆ ಪರ – ವಿರೋಧ ಚರ್ಚೆ ಶುರುವಾಗಿದ್ದು, ಕಾಮಗಾರಿಗಾಗಿ ಬಡವರ ಮನೆಯ ಮನೆಗಳನ್ನ ಒಡೆದು ಶ್ರೀಮಂತರ ಮನೆಗಳನ್ನ ಹಾಗೆ ಬಿಡಲಾಗಿದೆ ಎಂದು ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದ್ದಾರೆ. ರಾಜಕೀಯ ಪ್ರಭಾವ ಇರುವವರ ಕೆಲವು ಅಂಗಡಿಗಳನ್ನು, ಮನೆಗಳನ್ನು ಹಾಗೆ ಬಿಡಲಾಗಿದೆ. ಬಡವರ ಅಂಗಡಿ ಮುಂಗಟ್ಟು, ಮನೆ ಒಡೆಯಲಾಗಿದೆ.

ಸರಿಯಾದ ಯೋಜನೆ ಪ್ರಕಾರ ಕಾಮಗಾರಿ ನಡೆಯುತ್ತಿಲ್ಲ. ಹೊನ್ನಾಳಿ ಅಮನದ ಹೆಚ್ಚಿಸಲು ರಸ್ತೆ ಅಗಲೀಕರಣಕ್ಕೆ ಕೆಶಿಪ್ ಕಾಮಗಾರಿ ಮಹತ್ವದ್ದಾಗಿದೆ. ಸರಿಯಾಗಿ ರಸ್ತೆ ಅಗಲೀಕರಣ ಮಾಡದೇ ಹಾಗೇ ಬಿಡಲಾಗುತ್ತಿದೆ. ಕೆಶಿಪ್‌ನಿಂದ (KSHIP) 902 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಗದಗನಿಂದ ಹೊನ್ನಾಳಿವರೆಗೆ ಈ ರಸ್ತೆ ಕಾಮಗಾರಿಗೆ ಯೋಜನೆ ರೂಪುಗೊಂಡಿದೆ. ರಸ್ತೆಗೆ ಗುರುತಿಸಿದ ಎಲ್ಲಾ ಕಟ್ಟಡ ಒಡೆದು ಕಾಮಗಾರಿ ಮಾಡಬೇಕು. ಬಡವರಿಗೆ ಒಂದು ರೀತಿ, ಪ್ರಭಾವಿಗಳಿಗೆ ಒಂದು ರೀತಿ ಮಾಡಬಾರದು ಎಂದು ಸ್ಥಳೀಯರು ಸೇರಿದಂತೆ ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದರು.

Share This Article