ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ : ಸರ್ಕಾರದಿಂದ ಹೊಸ ಕಾನೂನು ಜಾರಿಗೆ ನಿರ್ಧಾರ..!

1 Min Read

ಹುಬ್ಬಳ್ಳಿ: ಮಗಳು ಬೇರೆ ಜಾತಿ ಹುಡುಗನನ್ನು ಮದುವೆಯಾಗಿದ್ದಳು ಎಂಬ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಸ್ವಂತ ತಂದೆಯೇ ಮಗಳನ್ನ ಕೊಡಲಿಯಿಂದ ಕೊಚ್ಚಿ ಕೊಂದದ್ದು ಗೊತ್ತೆ ಇದೆ. ಅದರಲ್ಲೂ ಕೊಲೆಯಾದ ಮಹಿಳೆ ಏಳು ತಿಂಗಳ ಗರ್ಭಿಣಿ ಕೂಡ ಆಗಿದ್ದರು. ಈ ಕೊಲೆ ಪ್ರಕರಣದ ಬೆನ್ನಲ್ಲೇ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ. ಈ ಸಂಬಂಧ ಗಂಭೀರವಾಗಿ ಪರಿಗಣಿಸುವುದಾಗಿ ಸರ್ಕಾರ ತಿಳಿಸಿದೆ.

ಮರ್ಯಾದಾ ಹತ್ಯೆ ವಿರುದ್ಧ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯ ಕೇಳಿ ಬಂದಿತ್ತು. ಈ ಸಂಬಂಧ ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿದ್ದವು. ಇದೀಗ ರಾಜ್ಯ ಸರ್ಕಾರ ಕೂಡ ಮರ್ಯಾದಾ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸುವುದಕ್ಕೆ ಚಿಂತನೆ ನಡೆಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದಾರೆ.

ಈ ಸಂಬಂಧ ಮಾತನ್ನಾಡಿರುವ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಮರ್ಯಾದಾ ಹತ್ಯೆ ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಕೇವಲ ಕಾನೂನು ಜಾರಿಗೊಳಿಸಿದರೆ ಸಾಲದು, ಅದನ್ನು ಅನುಷ್ಠಾನಕ್ಕೆ ತರುವ ಕೆಲಸವಾಗಬೇಕು ಎಂಬ ಮಾತನ್ನ ಹೇಳಿದ್ದಾರೆ. ಹುಬ್ಬಳ್ಳಿ ಅಂತ ಅಲ್ಲ, ಸಾಕಷ್ಟು ಜಿಲ್ಲೆಗಳಲ್ಲಿ ಈ ಘಟನೆ ನಡೆದಿದೆ. ಮಗಳು ಬೇರೆ ಜಾತಿ ಯುವಕನನ್ನ ಮದುವೆಯಾದಳು ಎಂಬ ಸಣ್ಣ ಕಾರಣಕ್ಕೆ, ಊರಿಗೆ ಬರಯವ ತನಕ ಕಾದು, ಕೊಲೆ ಮಾಡಿರುವ ಪೋಷಕರು ಇದ್ದಾರೆ. ಒಂದು ವೇಳೆ ಕಠಿಣ ಶಿಕ್ಷೆ ನಿಗಧಿ ಮಾಡಿದರೆ ಈ ರೀತಿಯ ಕ್ರೂರ ಘಟನೆಗಳು ನಡೆಯುವುದು ಕಡಿಮೆಯಾಗುವ ಸಾಧ್ಯತೆ ಇದೆ. ಎಷ್ಟೋ ಜೀವಗಳು ಬದುಕುವ ಸಾಧ್ಯತೆಯೂ ಇದೆ.

Share This Article