Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಪತ್ರಕರ್ತ ಕಣ್ಣನ್ ಹಾಗೂ ವಿತರಕ ನಾಗರಾಜ ಶೆಟ್ಟಿಯವರಿಗೆ ಸನ್ಮಾನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 09 : ಪತ್ರಕರ್ತ ಕೆ.ಎಂ.ಮುತ್ತಸ್ವಾಮಿ(ಕಣ್ಣನ್) ಇವರು 35 ವರ್ಷಗಳಿಂದಲೂ ಪತ್ರಿಕೋದ್ಯಮದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವುದನ್ನು ಹಾಗೂ ಸುಮಾರು 25 ವರ್ಷಗಳಿಂದ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿರುವ ಪಿ. ನಾಗರಾಜ ಶೆಟ್ಟಿ ಅವರನ್ನು ಗುರುತಿಸಿ ವಾಸವಿ ಮಹಲ್ ರಸ್ತೆಯಲ್ಲಿರುವ ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.

ವಾಸವಿ ಕ್ಲಬ್ ಫೋರ್ಟ್‍ನಿಂದ ವಿಶ್ವಾದ್ಯಂತ ನಡೆಯುವ ವಾಸವಿ ವೀಕ್ ಡೇ ಕಾರ್ಯಕ್ರಮದ ಅಂಗವಾಗಿ ಗೌರವಿಸಲಾಯಿತು.

ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ಅಧ್ಯಕ್ಷ ಕೋಟೇಶ್ವರ ಗುಪ್ತ ಮಾತನಾಡುತ್ತ ಪತ್ರಿಕೋದ್ಯಮದಲ್ಲಿ ಶಿಸ್ತು ಮತ್ತು ಬದ್ದತೆಯಿಂದ ಕೆಲಸ ಮಾಡುತ್ತಿರುವ ಕೆ.ಎಂ.ಮುತ್ತುಸ್ವಾಮಿ ಎಲ್ಲರಿಗೂ ಚಿರಪರಿಚಿತರು. ಅದೇ ರೀತಿ ನಾಗರಾಜ ಶೆಟ್ಟಿಯವರು ಕೂಡಾ ಪತ್ರಿಕಾ ವಿತರಕರಾಗಿ ಮನೆ ಮನೆಗೂ ಪತ್ರಿಕೆ ಹಂಚುವ ಮೂಲಕ ಚಿರಪರಿಚಿತರು.  ಪತ್ರಿಕೋದ್ಯಮವನ್ನೆ ವೃತ್ತಿಯನ್ನಾಗಿಸಿಕೊಂಡಿರುವ ಇವರ ಸೇವೆ ನಿರಂತರವಾಗಿರಬೇಕಾದರೆ ಕನ್ಯಕಾ ಪರಮೇಶ್ವರಿಯ ಕೃಪೆಯಿರಲಿ ಎಂದು ಹಾರೈಸಿದರು.

ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ಖಜಾಂಚಿ ಸತ್ಯನಾರಾಯಣಗುಪ್ತ ದೊಂತಿ, ಆರ್ಯವೈಶ್ಯ ಸಂಘದ ಸಹ ಕಾರ್ಯದರ್ಶಿ ಕೆ.ಎಸ್.ಮಂಜುನಾಥಶೆಟ್ಟಿ, ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ನಿರ್ದೇಶಕರಾದ ಟಿ.ಎಸ್. ಸುಹಾಸ್, ಹಾಗೂ ಸದಸ್ಯರುಗಳಾದ ಅವಿನಾಶ್, ಚಂದ್ರಮೋಹನ್ ಎಂ.ಎಸ್. ಸಂತೋಷ್, ಜ್ಯೋತಿ ಲಕ್ಷ್ಮಣ್, ಎಸ್.ಪಿ.ಶ್ರೀನಿವಾಸ್ ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...