Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸವಾಲುಗಳನ್ನು ಎದುರಿಸಿ ಯಶಸ್ವಿಯಾದವರನ್ನು ಸನ್ಮಾನಿಸಿದರೆ ಇತರರಿಗೆ ಪ್ರೇರಣೆ : ಡಾ.ನವೀನ್ ಬಿ.ಸಜ್ಜನ್

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 15 : ಕೌಟುಂಬಿಕ, ಸಾಮಾಜಿಕ, ಭಾವನಾತ್ಮಕವಾಗಿ ಯಾರು ಬಲಿಷ್ಠರಾಗಿರುತ್ತಾರೋ ಅಂತಹವರು ಮಾತ್ರ ಜೀವನದಲ್ಲಿ ಯಶಸ್ಸಿನ ಮೆಟ್ಟಿಲು ಏರಬಲ್ಲರು ಎಂದು ಡಾ.ನವೀನ್ ಬಿ.ಸಜ್ಜನ್ ಹೇಳಿದರು.

ರೋಟರಿ ಕ್ಲಬ್ ಮತ್ತು ಪ್ರಥಮ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಸಹಯೋಗದಲ್ಲಿ ರೋಟರಿ ಬಾಲಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ವೈದ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಗಾಟಿಸಿ ಮಾತನಾಡಿದರು.

ಪ್ರತಿಯೊಬ್ಬರಿಗೂ ಜೀವನದಲ್ಲಿ ಯಶಸ್ವಿಯಾಗಬೇಕೆಂಬ ಆಸೆ ಇರುತ್ತದೆ. ಆತ್ಮವಿಶ್ವಾಸದೊಂದಿಗೆ ಎಂತಹ ಸನ್ನಿವೇಶ, ಸವಾಲುಗಳನ್ನು ಎದುರಿಸುವಷ್ಟು ಸಾಮರ್ಥ್ಯ ವಿಶ್ವಾಸವುಳ್ಳವರು ಯಶಸ್ವಿಯಾಗುತ್ತಾರೆ. ಅಂತಹವರನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ಡಾ.ಮಹೇಶ್ ನಮ್ಮ ಸುತ್ತಮುತ್ತಲು ಅನೇಕ ಸಾಧಕರುಗಳು ತೆರೆಮರೆಯಲ್ಲಿ ಕೆಲಸ ಮಾಡುತ್ತಿರುತ್ತಾರೆ. ಸಮಾಜದಲ್ಲಿ ಸಾಧನೆ ಮಾಡಿರುವ ನಿವೃತ್ತರು ಯೋಧರು, ವೈದ್ಯರು, ಶುಶ್ರೂಷಕರು, ವೃತ್ತಿ ನಿರತರು, ಕವಿಗಳನ್ನು ಗುರುತಿಸಿ ಗೌರವಿಸಿ ಸಮಾಜಕ್ಕೆ ಸಾಧಕರ ಯಶೋಗಾಥೆಯನ್ನು ಪರಿಚಯಿಸುತ್ತಿರುವ ಪ್ರಥಮ್ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವೆಂದರು.

ಡಾ.ಬಿ.ಟಿ.ಲೋಲಾಕ್ಷಮ್ಮ ಮಾತನಾಡುತ್ತ ಯಶಸ್ಸು ಸಾಧಕರ ಸ್ವತ್ತೆ ಹೊರತು  ಸೋಮಾರಿಯ ಸ್ವತ್ತಲ್ಲ. ರೋಗಿಗಳ ಪ್ರಾಣ ಉಳಿಸುವಲ್ಲಿ ಹಗಲು ರಾತ್ರಿ ಎನ್ನದೆ ಸೇವೆ ಸಲ್ಲಿಸುವ ವೈದ್ಯರು, ನರ್ಸ್‍ಗಳ ಪಾತ್ರ ಸಮಾಜದಲ್ಲಿ ಅಮೂಲ್ಯವಾದುದು. ಅಂತಹ ಸಾಧಕರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ನಿಜಕ್ಕೂ ಸುತ್ತ್ಯಾರ್ಹ ಎಂದು ಗುಣಗಾನ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷರಾದ ರೊ.ಮಂಜುನಾಥ್ ಭಾಗವತ್ ಮಾತನಾಡಿ ರೋಟರಿ ಸಂಸ್ಥೆ ಮೊದಲಿನಿಂದಲೂ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದು, ಪ್ರತಿಭೆಗಳನ್ನು ಹೆಕ್ಕಿ ಹೊರತೆಗೆಯುವಲ್ಲಿ ಮುಂಚೂಣಿಯಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಪ್ರಥಮ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ದಿ ಸಂಸ್ಥೆ ಮಹಾನ್ ಸಾಧಕರನ್ನು ಸಮಾಜಕ್ಕೆ ಪರಿಚಯಿಸುತ್ತಿದೆ ಎಂದು ಹೇಳಿದರು.

ನಿವೃತ್ತ ಸೈನಿಕ ಜಯಣ್ಣ ಮಾತನಾಡುತ್ತ ನಿಸ್ವಾರ್ಥವಾಗಿ ಸಮಾಜಕ್ಕೆ ದುಡಿಯುವವರನ್ನು ಗುರುತಿಸಿ ಸನ್ಮಾನಿಸುವುದು ಉತ್ತಮ ಬೆಳವಣಿಗೆ ಇಂತಹ ಸಂಸ್ಥೆಗಳಿಗೆ ಬೇರೆಯವರು ಕೈಜೋಡಿಸಬೇಕೆಂದು ಮನವಿ ಮಾಡಿದರು.
ಡಾ.ಮನೋಜ್, ಡಾ.ಸಿದ್ದಲಿಂಗಪ್ಪ, ಡಾ.ಅಫ್ರಿದಿ, ಡಾ.ರಶ್ಮಿ ಇವರುಗಳಿಗೆ ವೈದ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವೈದ್ಯಕೀಯ ಕ್ಷೇತ್ರದ 30 ಮಂದಿ ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ರೋಟರಿ ಕ್ಲಬ್ ಉಪಾಧ್ಯಕ್ಷ ಗುರುಮೂರ್ತಿ, ಪ್ರಥಮ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಅಧ್ಯಕ್ಷ ನಂಜುಂಡೇಶ್ವರ, ಖಜಾಂಚಿ ಸುಮ, ಬೆಸ್ಕಾಂ ಗುತ್ತಿಗೆದಾರ ಪ್ರಸನ್ನ, ಕೊಪ್ಪಳದ ಶಶಿಧರ್ ಹಾಗೂ ಸಂಸ್ಥೆಯ ಪದಾಧಿಕಾರಿಗಳಾದ ಚಂದ್ರಿಕ, ಅನಿತ, ದೀಪಿಕಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!