Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಂ.ಕಾಂ. ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದ ಚಿತ್ರದುರ್ಗದ ಸಿ.ಎಂ.ಚೈತನ್ಯಗೆ ಸನ್ಮಾನ

---Advertisement---

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.31 : ಎಂ.ಕಾಂ. ಪದವಿಯಲ್ಲಿ ಪ್ರಥಮ ರ್ಯಾಂಕ್ ಗಳಿಸಿ ಮೂರು ಚಿನ್ನದ ಪದಕ ಹಾಗೂ ಎರಡು ನಗದು ಬಹುಮಾನವನ್ನು ಮೈಸೂರು ವಿಶ್ವವಿದ್ಯಾನಿಲಯದ 103 ನೇ ಘಟಿಕೋತ್ಸವದಲ್ಲಿ ಕುಲಪತಿಗಳಿಂದ ಸ್ವೀಕರಿಸಿದ ಚಿತ್ರದುರ್ಗದ ಸಿ.ಎಂ.ಚೈತನ್ಯ ಇವರನ್ನು ಚಂದ್ರವಳ್ಳಿ ವಾಯುವಿಹಾರಿಗಳ ಬಳಗದಿಂದ ಸನ್ಮಾನಿಸಲಾಯಿತು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಿಳಾ ಕಾಲೇಜಿನ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕ ಡಾ.ಸಿ.ಚನ್ನಕೇಶವ ಹಾಗೂ ಮಾಳಪ್ಪನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಪಿ.ಕೆ.ಮಂಜುಳಾ ಇವರ ಪುತ್ರಿ ಚೈತನ್ಯ 2019-20 ನೇ ಸಾಲಿನಲ್ಲಿ ಬಿ.ಕಾಂ. ಪದವಿಯಲ್ಲೂ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಪ್ರಥಮ ರ್ಯಾಂಕ್‍ನೊಂದಿಗೆ ಎರಡು ಚಿನ್ನದ ಪದಕ ಪಡೆದಿದ್ದರೆಂದು ಚಂದ್ರವಳ್ಳಿ ವಾಯುವಿಹಾರಿಗಳ ಬಳಗದವರು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ.ಸಿ.ಚನ್ನಕೇಶವ, ಫೈಲ್ವಾನ್ ತಿಪ್ಪೇಸ್ವಾಮಿ, ಮಹಮದಣ್ಣ, ಶಿಕ್ಷಕ ಕೆಂಚವೀರಪ್ಪ, ಚಿತ್ರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನೀತಮ್ಮ, ಡಾ.ಪ್ರಭಾಕರ್, ಎಸ್.ಎನ್.ರವಿಕುಮಾರ್, ಡಾ.ಸಂಜೀವಕುಮಾರ್‍ಪೋತೆ, ಷಣ್ಮುಖಪ್ಪ, ರಂಗಣ್ಣ, ವಿಜಯಕುಮಾರ್, ರಾಜು, ಮಂಜು, ನಿವೃತ್ತ ಮುಖ್ಯ ಶಿಕ್ಷಕ ಯಲ್ಲಪ್ಪರೆಡ್ಡಿ, ಪಾಪು ಸನ್ಮಾನ ಸಮಾರಂಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...