Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೌರವ ಡಾಕ್ಟರೇಟ್‌ ಪುರಸ್ಕೃತ ಕೆ.ಎಂ.ವೀರೇಶ್‍ರವರಿಗೆ ಕೋಟೆ ನಾಡಿನ ಗೆಳೆಯರ ಬಳಗದಿಂದ ಸನ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.20 : ಶಿಕ್ಷಣ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಮೈಸೂರು ಮುಕ್ತ ವಿಶ್ವವಿದ್ಯಾನಿಲಯ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್‍ರವರಿಗೆ ಡಾಕ್ಟರೇಟ್ ನೀಡಿ ಗೌರವಿಸಿರುವುದಕ್ಕೆ ಕೋಟೆ ನಾಡಿನ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಲಾಯಿತು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕೆ.ಎಂ.ವೀರೇಶ್‍ರವರಿಗೆ ಬೃಹದಾಕಾರವಾದ ಹಾರ, ಮೈಸೂರ ಪೇಟೆ ತೊಡಿಸಿ ಗೌರವಿಸಲಾಯಿತು.
ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಮಾತನಾಡಿ ಕೆ.ಎಂ.ವೀರೇಶ್‍ರವರು ಎಸ್.ಜೆ.ಎಂ. ವಿದ್ಯಾ ಸಂಸ್ಥೆಯಲ್ಲಿದ್ದಾಗಿನಿಂದಲೂ ಉತ್ತಮ ಕೆಲಸಗಳನ್ನು ಮಾಡಿಕೊಂಡು ಬಂದಿದ್ದರಲ್ಲದೆ ಅನೇಕರ ಜೀವನಕ್ಕೆ ನೆರವಾಗಿದ್ದಾರೆ. ತದ ನಂತರ ಅವರದೆ ಆದ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆ ಆರಂಭಿಸಿ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿದ್ದಾರೆಂದು ಸ್ಮರಿಸಿದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಾಕಷ್ಟು ಬಡವರ ಜೀವನಕ್ಕೆ ದಾರಿ ತೋರಿಸಿರುವ ಕೆ.ಎಂ.ವೀರೇಶ್‍ರವರು ಒಳ್ಳೆಯ ಕಲಾವಿದರೂ ಹೌದು. ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ, ಮುರುಘಾಸ್ವಾಮಿ ಪಾತ್ರವನ್ನು ಅಚ್ಚುಕಟ್ಟಾಗಿ ಅಭಿನಯಿಸುತ್ತಿದ್ದರು. ಅನೇಕ ಕಾರ್ಯಕ್ರಮಗಳಿಗೆ ದೇಣಿಗೆ ನೀಡುವುದು ಇವರ ಉದಾರತನ. ಕಲಾವಿದರಿಗೆ, ಲೇಖಕರಿಗೆ ಆಶ್ರಯ ನೀಡಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಅಖಿಲ ಭಾರತ ಎಪ್ಪತ್ತೈದನೆ ಕನ್ನಡ ಸಾಹಿತ್ಯ ಸಮ್ಮೇಳನ ಚಿತ್ರದುರ್ಗದಲ್ಲಿ ನಡೆದಿದ್ದಂತೂ ಅತ್ಯಂತ ಸಂತೋಷದ ಸಂಗತಿ ಎಂದು ಗುಣಗಾನ ಮಾಡಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವೀರೇಶ್‍ರವರು ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಸಮ್ಮೇಳನ ನಡೆಸಲು ಹೊರಟಿರುವುದು ಇನ್ನು ಖುಷಿಯ ವಿಚಾರ. ಚಿತ್ರದುರ್ಗ ಶರಣ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವ ಸ್ಥಳ. ಮುರುಘಾ ಪರಂಪರೆಯ ಯತಿಗಳ ಸಾಹಿತ್ಯ ಸೇವೆ ಕೂಡ ಅಪಾರವಾಗಿದೆ ಎಂದು ನೆನಪಿಸಿಕೊಂಡರು.

ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿನ ಇವರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿರುವುದು ಚಿತ್ರದುರ್ಗಕ್ಕೆ ಸಂದ ಕೀರ್ತಿ ಎಂದು ಡಾ.ಬಿ.ರಾಜಶೇಖರಪ್ಪ ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ಎಂ.ವೀರೇಶ್ ಶಿಕ್ಷಣ ರಂಗದಲ್ಲಿ ನಾನು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿರುವುದಕ್ಕೆ ಸಂತಸಗೊಂಡಿರುವ ಅಪಾರ ಅಭಿಮಾನಿಗಳು ನನ್ನನ್ನು ಗೌರವಿಸುತ್ತಿರುವುದಕ್ಕೆ ಚಿರಋಣಿಯಾಗಿದ್ದೇನೆಂದು ಕೃತಜ್ಞತೆಗಳನ್ನು ಸಲ್ಲಿಸಿದರು.

ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯಿಕ ಕ್ಷೇತ್ರಗಳಲ್ಲಿ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವೀರೇಶ್‍ರವರ ಕಾಳಜಿಯನ್ನು ಗುರುತಿಸಿ ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿರುವುದು ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಕನ್ನಡಾಂಭೆಗೆ ಸೇವೆ ಸಲ್ಲಿಸಿರುವ ಇವರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸೇವೆಯನ್ನು ಮುಂದುವರೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಉನ್ನತ ಮಟ್ಟದ ಪ್ರಶಸ್ತಿಗಳು ಲಭಿಸಲಿ ಎಂದು ಶುಭ ಹಾರೈಸಿದರು.

ಆರ್ಥಿಕ ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಡಾ.ಪಿ.ಯಶೋಧ ಬಿ.ರಾಜಶೇಖರಪ್ಪ, ನಾಗರಾಜ್ ಸಂಗಮ್, ಕೆ.ಇ.ಬಿ.ಷಣ್ಮುಖಪ್ಪ, ಸೋಮು, ಕಿರಣ್ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment