ಹಿಂದೆ ಸರಿದಿದ್ದ ಹೊರಟ್ಟಿ‌ ಮತ್ತೆ ರಾಜೀನಾಮೆ ಮಾತಾಡಿದ್ದಾರೆ ; ಕಾರಣವೇನು ಗೊತ್ತಾ..?

 

 

ಇತ್ತೀಚೆಗಷ್ಟೇ ಸದನದಲ್ಲಿ ಆದ ಬೆಳವಣಿಗೆಯಿಂದ ಬೇಸತ್ತು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಬಸವರಾಜ್ ಹೊರಟ್ಟಿ ಅವರು ಘೋಷಣೆ ಮಾಡಿದ್ದರು. ಬಳಿಕ ಅದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಹಿಂದೆ ಸರಿದಿದ್ದರು. ಇದೀಗ ಮತ್ತೆ ರಾಜೀನಾಮೆ ನೀಡುವ ಬಗ್ಗೆ ಮಾತಾಡಿದ್ದಾರೆ.

 

ಮತ್ತೆ ರಾಜೀನಾಮೆ ಕೊಡುವುದಕ್ಕೆ ಕಾರಣ ಏನೆಂಬುದನ್ನು ತಿಳಿಸಿದ್ದಾರೆ. ಸದನಕ್ಕೆ ಕಾಲಿಟ್ಟ ಮೇಲೆ ಅಲ್ಲಿ ಎಲ್ಲರು ಶಾಸಕರೆ. ಹಾಗಾಗಿ ಅಲ್ಲಿ ಯಾವುದೇ ವಯಸ್ಸಿನ ಪ್ರಶ್ನೆ ಎದುರಾಗುವುದಿಲ್ಲ. ಸದನದಲ್ಲಿ ಅನುಭವಿಗಳು ಹೇಳುವ ಪಾಠವನ್ನು ಕೇಳುವ ಪರಿಪಾಠವೂ ಇಲ್ಲ. ಇಲ್ಲಿ ಯಾರಿಗೂ ಯಾರ ಹೆದರಿಕೆಯೂ ಇಲ್ಲ. ಎಲ್ಲರಿಗೂ ಹಣ ಕೊಟ್ಟು ಆಯ್ಕೆಯಾಗಿ ಬರುತ್ತೇವೆ ಎಂಬ ಭಾವನೆ ಒಂದೆಡೆಯಾದರೆ, ಮತ್ತೊಂದೆಡೆ ಜಾತಿ ವ್ಯವಸ್ಥೆಯೂ ದೊಡ್ಡದಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎಲ್ಲರು ತಿಳಿದುಕೊಳ್ಳಬೇಕು. ಈ ಹಿಂದೆ ರಾಜಕಾರಣಕ್ಕೂ, ಈಗ ಇರುವ ರಾಜಕಾರಣಕ್ಕೂ ಬಹಳ ವ್ಯತ್ಯಾಸವಿದೆ. ಇಲ್ಲಿ ಏನಿದ್ರು ಹಣ ಕೊಟ್ಟು ಗೆದ್ದು ಬರುವುದು. ಬೆಂಗಳೂರಿನಲ್ಲಿ ಕೂತು ಹಣ ಮಾಡಿ, ಇಲ್ಲಿ ಬಂದು ವಿಧಾನಪರಿಷತ್ ನಲ್ಲಿ ಗೆಲ್ಲುವ ಕೆಲಸವಾಗಿ ಬಿಟ್ಟಿದೆ.

ಎಲ್ಲಿಯವರೆಗೂ ಹಣ ಕೊಟ್ಟು ಮತ ಪಡೆಯುತ್ತಾರೋ, ಅಲ್ಲಿಯವರೆಗೂ ಪ್ರಜಾಪ್ರಭುತ್ವವನ್ನು ಕೇಳುವವರು ಯಾರೂ ಇರುವುದಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ನಾನು ರಾಜೀನಾಮೆ ಕೊಡಬೇಕೆಂದು ತೀರ್ಮಾನ ಮಾಡಿದ್ದೇನೆ. ಸದನ ಎನ್ನುವುದು ಒಂದು ದೇವಸ್ಥಾನ. ಅಲ್ಲಿ ಹನಿಟ್ರ್ಯಾಪ್ ನಂತಹ ವಿಚಾರಗಳ ಚರ್ಚೆ ನಡೆಯುವುದೇ ತಲೆತಗ್ಗಿಸುವಂತಹ ವಿಚಾರ. ಇದರಿಂದ ಯಾರಿಗೆಒಳ್ಳೆಯದಾಗುತ್ತೆ..? ಹನಿಟ್ರ್ಯಾಪ್ ಬಲೆ ಬೀಸಿದವನು ಒಳ್ಳೆಯವನಲ್ಲ, ಅದರಲ್ಲಿ ಸಿಲುಕಿಕೊಂಡವನು ಒಳ್ಳೆಯವನಲ್ಲ ಎಂದು ಬಸವರಾಜ್ ಹೊರಟ್ಟಿ ಬೇಸರ ಹೊರ ಹಾಕಿದ್ದಾರೆ.

suddionenews

Recent Posts

ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ

ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ, ಈ ರಾಶಿಯವರ ಭಾಗ್ಯ ಎನ್ನಬೇಕೋ ಪುಣ್ಯ…

5 hours ago

ಪೋಕ್ಸೋ ಹಾಗೂ ಬಾಲ್ಯ ವಿವಾಹ ತಡೆಗೆ ನಾಲ್ಕು ಹಂತದಲ್ಲಿ ಜಾರಿ ತಂಡಗಳ ರಚನೆ : ಜಿಲ್ಲಾಧಿಕಾರಿ ಸೂಚನೆ

ಚಿತ್ರದುರ್ಗ.ಎಪ್ರಿಲ್.11: ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ ರೂಪಿಸುವುದರೊಂದಿಗೆ ಹಳ್ಳಿ, ಗ್ರಾಮ ಪಂಚಾಯಿತಿ, ತಾಲ್ಲೂಕು…

15 hours ago

ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿ ಹೇಳಿಕೆ : ಸೂಕ್ತ ಕ್ರಮಕ್ಕೆ ಬಿಜೆಪಿ ಒತ್ತಾಯ

ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ…

15 hours ago

ಯತ್ನಾಳ್ ಪರವಾಗಿ ಮಾತನಾಡಿದ್ದ ಜಯಮೃತ್ಯುಂಜಯ ಸ್ವಾಮೀಜಿ; ಎಚ್ಚರಿಕೆ ನೀಡಿದ ಪಂಚಮಸಾಲಿ ಟ್ರಸ್ಟ್

ಹುಬ್ಬಳ್ಳಿ; ಇತ್ತೀಚೆಗಷ್ಟೇ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಆರು ವರ್ಷಗಳ ಕಾಲ ಪಕ್ಷದಿಂದ ಹೊರಗಿಟ್ಟಿದೆ. ಹೀಗಾಗಿ ಪಂಚಮಸಾಲಿ…

15 hours ago

ಹಿರಿಯೂರಿನಲ್ಲಿ ಆಲಿಕಲ್ಲು ಸಹಿತ ಮಳೆಯ ಆರ್ಭಟ : ಬೆಳೆ ಹಾನಿ

ಸುದ್ದಿಒನ್, ಹಿರಿಯೂರು, ಏಪ್ರಿಲ್. 11 : ನಗರ ಪ್ರದೇಶ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಗಾಳಿ, ಗುಡುಗು, ಮಿಂಚು ಸೇರಿದಂತೆ…

15 hours ago

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅವಿರೋಧ ಆಯ್ಕೆ ; ಯಾರೀ ನೈನಾರ್ ನಾಗೇಂದ್ರನ್..?

    ಚೆನ್ನೈ; ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಕೊಟ್ಟ ಬಳಿಕ ಇದೀಗ ಅವಿರೋಧ ಆಯ್ಕೆ ಮಾಡಲಾಗಿದೆ.…

16 hours ago