ಹೊಸದುರ್ಗ : ಫೆಬ್ರವರಿ 12 ರಂದು ಕುಂದೂರಿನಲ್ಲಿ ಅಂಭಾದೇವಿ ರಥೋತ್ಸವ

 

ಸುದ್ದಿಒನ್, ಹೊಸದುರ್ಗ, ಫೆಬ್ರವರಿ. 03 : ತಾಲ್ಲೂಕಿನ ಬಾಗೂರು ಸಮೀಪದ ಕುಂದೂರು ಗೊಲ್ಲರಹಟ್ಟಿಯ ಗೋವರ್ಧನಗಿರಿ ಜಗದಾಂಬ ಮಹಾಸಂಸ್ಥಾನ ಮಠದಲ್ಲಿ ಫೆ.11ರಿಂದ 13ರವರೆಗೆ ದಕ್ಷಿಣಮ್ನಾಯ ಕ್ಷೇತ್ರದ ಅಂಭಾದೇವಿ ಮತ್ತು ತಿರುಪತಿ ವೆಂಕಟೇಶ್ವರ 12ನೇ ವರ್ಷದ ಬ್ರಹ್ಮರಥೋತ್ಸವ ಜರುಗಲಿದೆ.

ಫೆ. 11ರಂದು ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣ ಹಾಗೂ ಸಂಜೆ 7ಕ್ಕೆ ಅಂಭಾದೇವಿ ಮತ್ತು ತಿರುಮಲ ಸ್ವಾಮಿಗೆ ಕಂಕಣಧಾರಣೆ ಜರುಗಲಿದೆ. ಫೆ.12ರಂದು ಬೆಳಿಗ್ಗೆ 10.30ಕ್ಕೆ ಮಹಾಸಂಸ್ಥಾನ ಮಠದ ತಿಮ್ಮಪ್ಪ ಸ್ವಾಮೀಜಿಯಿಂದ ಗೋವರ್ಧನಗಿರಿ ಸಿಂಹಾಸನ ಪೀಠಾರೋಹಣ ನಡೆಯಲಿದ್ದು, ಅದೇ ದಿನ ಸಂಜೆ 5ಗಂಟೆಗೆ ಬ್ರಹ್ಮರಥೋತ್ಸವ ಜರುಗಲಿದೆ. ರಥೋತ್ಸವದ ನಂತರ ಗೋವರ್ಧನಗಿರಿ ಧರ್ಮದ ಬಾವುಟ ಹರಾಜು ಹಾಕಲಾಗುವುದು.

ಫೆ.12ರಂದು ಜರುಗಲಿರುವ ಬ್ರಹ್ಮರಥೋತ್ಸವದಲ್ಲಿ ಹರಕೆ ಹೊತ್ತ ಭಕ್ತರು ಮುಡಿ ತೆಗೆಸುವುದು. ಫೆ.13ರಂದು ಸಂಜೆ 4.30ಕ್ಕೆ ಕುಂಭೋತ್ಸವ ಆಚರಣೆಯೊಂದಿಗೆ ಜಾತ್ರೆ ಕೊನೆಗೊಳ್ಳಲಿದೆ. ಆಗಮಿಸುವ ಭಕ್ತರಿಗೆ ಮೂರು ದಿನವೂ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಅಂಭಾದೇವಿಯ ದೇವಸ್ಥಾನ ಕಟ್ಟಡ ಕಾರ್ಯ ಆರಂಭವಾಗಿದ್ದು, ಸರ್ವ ಭಕ್ತರು ಕಟ್ಟಡ ನಿರ್ಮಾಣಕ್ಕೆ ತನು ಮನ ಧನ ಸಹಾಯದೊಂದಿಗೆ ಜಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸ್ಥಾನ ಮಠದ ಪ್ರಕಟಣೆ ತಿಳಿಸಿದೆ.

suddionenews

Recent Posts

ಪ್ರೀತಿಯ ನಾಟಕ.. ಲಕ್ಷ ಲಕ್ಷ ವಸೂಲಿ.. ಮಹಿಳೆಯ ವಂಚನೆಯಿಂದ ಸೂಸೈಡ್ ದಾರಿ ಹಿಡಿದ ಚಿತ್ರದುರ್ಗ ಗ್ರಾ.ಪಂ ಸದಸ್ಯ..!

ಚಿತ್ರದುರ್ಗ: ಆತ ಒಳ್ಳೆಯ ಕೆಲಸದಲ್ಲಿದ್ದ.. ಮುದ್ದಾದ ಹೆಂಡತಿ.. ಸುಖವಾದ ಸಂಸಾರ.. ಆದರೆ ಅವರ ಬಾಳಲ್ಲಿ ಬಂದ ಮತ್ತೊಬ್ಬ ಮಹಿಳೆಯಿಂದ ಸಂಸಾರ…

6 hours ago

ಚಿತ್ರದುರ್ಗ : ಜಿ.ಎನ್.ಹನುಮಂತರೆಡ್ಡಿ ನಿಧನ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 03 : ನಗರದ ಕೆಳಗೋಟೆ ಚಿನ್ನಪ್ಪ ಲೇಔಟ್ ನಿವಾಸಿ, ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘದ…

6 hours ago

ಶಾಸಕರು ಹಗಲು ದರೋಡೆ ಮಾಡುತ್ತಿದ್ದಾರೆ : ಮಾಜಿ ಸಚಿವ ಆಂಜನೇಯ ಆರೋಪ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 03…

7 hours ago

ಚಿತ್ರದುರ್ಗ : ನಿವೃತ್ತ ಸೈನಿಕರಿಗೆ ಅದ್ದೂರಿ ಸ್ವಾಗತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 03…

7 hours ago

ಪತ್ರಕರ್ತ ಕಣ್ಣನ್ ಜನ್ಮದಿನ ಸಡಗರ

ಚಿತ್ರದುರ್ಗ, ಸುದ್ದಿಒನ್, ಫೆ.3: ಚಿತ್ರದುರ್ಗ ಜಿಲ್ಲೆಯಲ್ಲಿ ಕಣ್ಣನ್ ಎಂದೇ ಚಿರಪಚಿತರಾಗಿರುವ ಕೆ.ಎಂ.ಮುತ್ತುಸ್ವಾಮಿ ಜನ್ಮದಿನವನ್ನು ದಿಢೀರ್ ಆಗಿ ಆಚರಿಸಿ ಸಂಭ್ರಮಿಸಿದರು. ಜಿಲ್ಲಾ…

7 hours ago

ಇನ್ಮುಂದೆ ಯಾರ ಮುಲಾಜು ನೋಡಲ್ಲ : ರೆಬೆಲ್ ಆದ ಶ್ರೀರಾಮುಲು

  ಗದಗ: ಕಳೆದ ಕೆಲವು ದಿನಗಳಿಂದಾನೂ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನಡುವೆ ಎಲ್ಲವೂ ಸರಿ ಇಲ್ಲ. ಒಬ್ಬರಿಗೊಬ್ಬರು ಮಾತಿನ…

8 hours ago