Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗ | ಹಳೇ ಕುಂದೂರು ಗ್ರಾಮದಲ್ಲಿ ಮಾಂಸಹಾರಿ ಊಟ ಸೇವನೆ : ಸುಮಾರು 50ಕ್ಕೂ ಜನರು ಅಸ್ವಸ್ಥ

Facebook
Twitter
Telegram
WhatsApp

ಚಿತ್ರದುರ್ಗ . ಏ.06:   ಹೊಸದುರ್ಗ ತಾಲ್ಲೂಕಿನ ಹಳೇ ಕುಂದೂರು ಗ್ರಾಮದಲ್ಲಿ ಬುಧವಾರ ಸಂಜೆ ರಂಗಪ್ಪ ತಂದೆ ಹನುಮಂತಪ್ಪ ಅವರ ಮನೆಯ ದೇವರ ಕಾರ್ಯಕ್ರಮದಲ್ಲಿ, ಮಾಂಸಹಾರಿ ಊಟ ಮಾಡಿದ ಸುಮಾರು 50 ಜನರು ಅಸ್ವಸ್ಥರಾದ ಘಟನೆ ನಡೆದಿದೆ.

ಮಗಳ ಮದುವೆ ನಂತರ ರಂಗಪ್ಪ ಮನೆಯಲ್ಲಿ ದೇವರ ಕಾರ್ಯ ನಡೆಸಿ ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮದ ನೆಂಟರಿಷ್ಠರನ್ನು ಊಟಕ್ಕೆ ಆಹ್ವಾನಿಸಿದ್ದರು. ಕಾರ್ಯಕ್ರಮದಲ್ಲಿ ಊಟ ಮಾಡಿದ  ನಾಲ್ಕೈದು ಜನರಿಗೆ ಗುರುವಾರ ಬೆಳಗಿನಿಂದಲೇ ಭೇದಿ ಜ್ಚರ, ಹೊಟ್ಟೆ ಮುರಿತ ನೋವು ಕಾಣಿಸಿಕೊಂಡಿದೆ. ಅಸ್ವಸ್ಥರು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ನಂತರ ಶುಕ್ರವಾರ ಕಾರ್ಯಕ್ರಮದಲ್ಲಿ ಊಟಮಾಡಿದ 37 ಗ್ರಾಮಸ್ಥರಲ್ಲಿ ಅಸ್ವಸ್ಥೆ ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಬಾಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಿAದ ತಕ್ಷಣವೇ ತುರ್ತಾಗಿ ಹಳೇ ಕುಂದೂರಿನಲ್ಲಿ ತಾತ್ಕಾಲಿಕ ಚಿಕಿತ್ಸಾ ಘಟಕವನ್ನು ತೆರೆದು ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗಿದೆ. 11 ಪ್ರಕರಣಗಲ್ಲಿ ಹೆಚ್ಚಿನ ಚಿಕಿತ್ಸೆಗೆ ಬಾಗೂರು ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಮಾರ್ಚ್ 6 ಶನಿವಾರದಂದು ಕೂಡ 2 ಅಸ್ವಸ್ಥ ಪ್ರಕರಣಗಳು ಬೆಳಕಿಗೆ ಬಂದಿವೆ.  ಆದ್ದರಿಂದ ಹೊಸದುರ್ಗ ಸಂಚಾರಿ ಆರೋಗ್ಯ ಘಟಕವನ್ನು ಗ್ರಾಮದಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.

 

ಪ್ರಕರಣದ ಹಿನ್ನಲೆಯಲ್ಲಿ ಗ್ರಾಮದ 6 ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ದೇವತಾ ಕಾರ್ಯದಲ್ಲಿ ಭಾಗವಹಿಸದರಲ್ಲಿ ಮಾತ್ರ ಭೇದಿ, ಜ್ವರ, ಹೊಟ್ಟೆ ಮುರಿತ, ನೋವು ಕಂಡು ಬಂದಿದೆ. ವಾಂತಿ ಭೇದಿ ಪ್ರಕರಣಗಳ ವಿಷಯ ತಿಳಿದ ತಕ್ಷಣ ತಾಲ್ಲೂಕು ಆರೋಗ್ಯಾಧಿಕರಿಗಳ ಆರ್.ಆರ್.ಟಿ ತಂಡ, ಜಿಲ್ಲಾ ಸರ್ವೇಕ್ಷಣಾ ಕಛೇರಿಯ ಆರ್.ಆರ್.ಟಿ ತಂಡಗಳು ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ.  ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ತಂಡಗಳು ಗ್ರಾಮದ ಪ್ರತಿ ಮನೆ ಮನೆ ಭೇಟಿ ನೀಡಿ ಶುದ್ಧ ಕುಡಿಯುವ ನೀರು, ಬೇಸಿಗೆ ತಾಪಮಾನ ರಕ್ಷಣೆ, ಶುದ್ಧ ಆಹಾರ ಸೇವಿಸುವ ಬಗ್ಗೆ ಸಾರ್ವಜನಿಕರಿಗೆ  ಬಗ್ಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಿ ಅರಿವು ಮೂಡಿಸಿದ್ದಾರೆ.

ಬಾಗೂರು ಆರೋಗ್ಯಾಧಿಕಾರಿ ಡಾ.ಪರಶುರಾಮ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ವೀರೇಂದ್ರ ಪಾಟೀಲ್, ಜಿಲ್ಲಾ ಆರ್.ಆರ್.ಟಿ. ತಂಡದ ಆರೋಗ್ಯ ನಿರೀಕ್ಷಣಾಧಿಕಾರಿ ಎಮ್.ಹೆಚ್.ಮಂಜುನಾಥ, ವಿಶ್ವನಾಥ. ಆಶಾ ಕಾರ್ಯಕರ್ತೆಯರು ಸಂಚಾರಿ ಆರೋಗ್ಯ ತಪಾಸಣಾ ತಂಡ ಆರೋಗ್ಯ ಜಾಗೃತಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!