ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಭದ್ರಾ ಮೇಲ್ದಂಡೆ ಯೋಜನೆಯಡಿ ಪ್ರಾಯೋಗಿಕವಾಗಿ ಹರಿಸಲಾಗುತ್ತಿದ್ದ ನೀರನ್ನು ಅಕ್ರಮವಾಗಿ ಪಡೆಯುವ ದುರುದ್ದೇಶದಿಂದ ಕಿಡಿಗೇಡಿಗಳು ಚಿತ್ರದುರ್ಗ ಶಾಖಾ ಕಾಲುವೆಯನ್ನು ಹಾನಿ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆ ಹೋಬಳಿ ವ್ಯಾಪ್ತಿಯಲ್ಲಿ ನಡೆದಿದೆ.
ಮಾಡದಕೆರೆ ಹೋಬಳಿಯ ಲಕ್ಕಿಹಳ್ಳಿ ಗ್ರಾಮದಿಂದ ಸುಮಾರು 9 ಕಿ.ಮೀ ದೂರದಲ್ಲಿರುವ ಅರಣ್ಯ ಪ್ರದೇಶದ ರಿ.ಸರ್ವೆ ನಂ: 161, ಚೈನೇಜ್ 79.00 ಕಿ.ಮೀ ಹಾದು ಹೋಗಿರುವ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಹಾದು ಹೋಗಿದ್ದು, ದಿನಾಂಕ:16.09.2026ರಂದು ರಾತ್ರಿ ವೇಳೆಯಲ್ಲಿ ಸದರಿ ಕಾಲುವೆಯನ್ನು ಕೆಲವು ಕಿಡಿಗೇಡಿಗಳು ನೀರು ಹರಿಯುತ್ತಿರುವ ಕಾಲುವೆಯನ್ನು ಧ್ವಂಸಗೊಳಿಸಿ. ಕಾಲುವೆಯಲ್ಲಿ ಹರಿಯುತ್ತಿದ್ದ ಸುಮಾರು ಪ್ರಮಾಣದ ನೀರು ಪೋಲಾಗಿದ್ದು. ಕಾಲುವೆಗೆ ಸಂಬಂಧಿಸಿದಂತೆ ಸುಮಾರು 50 ಲಕ್ಷ ರೂ. ನಷ್ಟ ಉಂಟಾಗಿರುತ್ತದೆ.
ಈ ಬಗ್ಗೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಪ್ರವೀಣ್ ಕುಮಾರ್ ಜಿ.ಎಸ್. ಸಹಾಯಕ ಇಂಜನಿಯರ್, ಭದ್ರಾ ಮೇಲ್ದಂಡೆ ಯೋಜನೆ ಉಪವಿಭಾಗ, ಹಿರಿಯೂರು ಇವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಠಾಣೆ .:511/2026, 326(1), 324(4)(5) 2.2.2.-2023, ಕಲಂ 55 ಕರ್ನಾಟಕ ಇರಿಗೇಷನ್ ಆಕ್ಟ್-1965 ಮತ್ತು ಕಲಂ 3 ಪ್ರಿವೆನ್ನನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್-1984 ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ. ಸದರಿ ನೀರು ಹರಿಯುವ ಕಾಲುವೆಯನ್ನು ಧ್ವಂಸಗೊಳಿಸಿದ ಆರೋಪಿಗಳನ್ನು ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.











